7
ದೆಹಲಿ:ಈಗಾಗಲೇ ಒಂದು ದೇಶ ಒಂದು ಚುನಾವಣೆ ಬಗ್ಗೆ ನಿವೆಲ್ಲ ಕೇಳಿದ್ದೀರಿ. ಇದರ ಬೆನ್ನಲ್ಲೇ ಇದೀಗ ಸಂಸತ್ತಿನ ಚಳಿಗಾಲದ ಅಧಿವೇಶನದ ನಡುವೆ ಪ್ರಧಾನಿ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ಕೇಂದ್ರ ಸಚಿವ ಸಂಪುಟದ ಮಹತ್ವದ ಸಭೆ ನಡೆದಿದೆ. ಮೂಲಗಳ ಪ್ರಕಾರ, ಸಭೆಯಲ್ಲಿ ಕೇಂದ್ರ ಸಚಿವ ಸಂಪುಟವು ‘ಒಂದು ರಾಷ್ಟ್ರ ಒಂದು ಚುನಾವಣೆ’ ಮಸೂದೆಗೆ ಅನುಮೋದನೆ ನೀಡಿದೆ.ಸದ್ಯ ಕೇಂದ್ರ ಸರ್ಕಾರವು ಈ ಮಸೂದೆಯನ್ನ ಚಳಿಗಾಲದ ಅಧಿವೇಶನದಲ್ಲಿ ಸದನದಲ್ಲಿ ಮಂಡಿಸಬಹುದು ಎಂದು ತಿಳಿದುಬಂದಿದೆ. ಇನ್ನು ಒಂದು ದೇಶ, ಒಂದು ಚುನಾವಣೆ ಯೋಜನೆ ಜಾರಿಗೆ ತರುವುದು ಪ್ರಧಾನಿ ಮೋದಿ ಕಲ್ಪನೆಯಾಗಿದೆ.