11
ರಾಯಚೂರ: ರಾಜ್ಯದಲ್ಲಿ ಭತ್ತ ಬೆಳೆಯುವ ರೈತರಿಗೆ ಶಾಕಿಂಗ್ ಸುದ್ದಿಯೊಂದು ಕಾದಿದೆ. ಹೌದು, ರಾಜ್ಯದ ಭತ್ತಕ್ಕೆ ತೆಲಂಗಾಣದಲ್ಲಿ ಏಕಾಏಕಿ ನಿರ್ಬಂಧ ಹೇರಲಾಗಿದೆ. ಈ ಹಿನ್ನಲೆ ರಾಯಚೂರಿನ ಗಡಿಯಲ್ಲಿ ರೈತರು ಹೋರಾಟ ನಡೆಸಿದ್ದಾರೆ. ಹೋರಾಟ ಸ್ಥಳಕ್ಕೆ ಭೇಟಿ ನೀಡಿದ ಕಲಬುರಗಿ ವಿಭಾಗೀಯ ಎಪಿಎಂಸಿ ಅಧಿಕಾರಿ ರಾಜೇಶ್ವರಿ, ತೆಲಂಗಾಣದ ಅಧಿಕಾರಿಗಳೊಂದಿಗೆ ಮಾತನಾಡಿ ಕೂಡಲೇ ಸಮಸ್ಯೆ ಬಗೆಹರಿಸುವ ಭರವಸೆ ನೀಡಿದ್ದಾರೆ. ಇನ್ನು ಮುಕ್ತ ಮಾರುಕಟ್ಟೆಯಲ್ಲಿ ಮಾರಲು ಅವಕಾಶ ಕೊಡಿ ಎಂದು ರೈತರು ಆಗ್ರಹಿಸಿದ್ದಾರೆ. ಹೆದ್ದಾರಿ ಬಂದ್ ಹಿನ್ನೆಲೆ ವಾಹನಗಳು ಕಿಲೋಮೀಟರ್ ಗಟ್ಟಲೇ ನಿಂತು ಟ್ರಾಫಿಕ್ ಜಾಮ್ ಆಗಿತ್ತು.