ಲಕ್ಷ್ಮೇಶ್ವರ:ಬಾಲೆಹೊಸೂರು ಗ್ರಾಮದ ಎಲ್ಲ ಸರಕಾರಿ ಶಾಲೆಗಳಲ್ಲಿ ಸಮುದಾಯದ ಸಹಭಾಗಿತ್ವದಿಂದಾಗಿ ಮಕ್ಕಳ ಕಲಿಕೆಗೆ ಹಾಗೂ ಶೈಕ್ಷಣಿಕ ವಾತಾವರಣಕ್ಕೆ ಪೂರಕವಾದಂತಹ ವಾತಾವರಣ ಇದ್ದು ಗ್ರಾಮೀಣ ಪ್ರದೇಶದ ಮಕ್ಕಳ ಶೈಕ್ಷಣಿಕ ಪ್ರಗತಿಗೆ ಸಹಾಯಕಾರಿಯಾಗಿದೆ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್ ಎನ್ ನಾಯ್ಕ ಅವರು ಹರ್ಷ ವ್ಯಕ್ತಪಡಿಸಿದರು.
ಗದಗ ಜಿಲ್ಲೆ ಲಕ್ಷ್ಮೇಶ್ವರ ತಾಲೂಕಿನ ಬಾಲೆಹೊಸೂರು ಗ್ರಾಮದ ಸರ್ಕಾರಿ ಕಿರಿಯ ಪ್ರಾಥಮಿಕ ಕನ್ನಡ ಹೆಣ್ಣು ಮಕ್ಕಳ ಶಾಲೆಯಲ್ಲಿ ಜರುಗಿದ ಸೂರಣಗಿ ಕ್ಲಸ್ಟರ್ ಮಟ್ಟದ ಎಫ್ ಎಲ್ ಎನ್ ಕಲಿಕಾ ಹಬ್ಬದ ಉದ್ಘಾಟನಾ ಸಮಾರಂಭದಲ್ಲಿ ಭಾಗವಹಿಸಿ ಅವರು ಮಾತನಾಡಿದರು.
ಶಾಲೆಗಳ ಎಸ್ಡಿಎಂಸಿ ಅಧ್ಯಕ್ಷರು ಹಾಗೂ ಪದಾಧಿಕಾರಿಗಳು ಸ್ಥಳೀಯ ಆಡಳಿತದ ಸಂಸ್ಥೆಗಳು ಸಮನ್ವಯ ಸಾಧಿಸಿ ಕಲಿಕೆಯನ್ನು ಪ್ರೋತ್ಸಾಹಿಸುವುದು ಇತರ ಗ್ರಾಮಗಳಿಗೂ ಮಾದರಿಯಾಗಿದೆ ಎಂದರು.

ಸಮಾರಂಭದ ಅಧ್ಯಕ್ಷತೆಯನ್ನು ಎಸ್ ಡಿ ಎಮ್ ಸಿ ಅಧ್ಯಕ್ಷರಾದ ಹಾಲೇಶ್ ಜಾಲವಾಡಗಿ ವಹಿಸಿಕೊಂಡಿದ್ದರು, ಪರಶುರಾಮ್ ಮೈಲಾರಿ , ಸಿದ್ದಪ್ಪ ನೆನಗನಹಳ್ಳಿ ಗ್ರಾಮ ಪಂಚಾಯಿತಿ ಅಧ್ಯಕ್ಷರು ಉಪಾಧ್ಯಕ್ಷರು ಹಾಗೂ ಸರ್ವ ಸದಸ್ಯರು, ಗ್ರಾಮದ ಶಿಕ್ಷಣ ಪ್ರೇಮಿಗಳು ಎಸ್ ಡಿ ಎಮ್ ಸಿ ಉಪಾಧ್ಯಕ್ಷರು ಹಾಗೂ ಸರ್ವ ಸದಸ್ಯರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.
ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಕಾರ್ಯದರ್ಶಿ ಎಂ ಎ ನದಾಫ್, ಬಿ ಆರ್ ಪಿ ಬಿ ಎಂ ಯರಗುಪ್ಪಿ ಸಿಆರ್ಪಿಗಳಾದ ಆರ್ ಮಹಾಂತೇಶ್, ಜ್ಯೋತಿ ಗಾಯಕ್ವಾಡ್, ಎಲ್ ಎಫ್ ಮಠದ ವಿವಿಧ ಶಾಲೆಗಳಿಂದ ಆಗಮಿಸಿದ ಪ್ರಧಾನ ಗುರುಗಳು ಸಹ ಶಿಕ್ಷಕರು ಕಾರ್ಯಕ್ರಮದ ಸಂಪನ್ಮೂಲ ವ್ಯಕ್ತಿಗಳು ನಿರ್ಣಾಯಕರು ಕಾರ್ಯಕ್ರಮವನ್ನು ಯಶಸ್ವಿಗೊಳಿಸಲು ಸಹಕರಿಸಿದರು. ಶೋಭಾ ನಡುವಿನಮನಿ ನಿರೂಪಿಸಿದರು, ಮುಖ್ಯೋಪಾಧ್ಯಾಯರಾದ ಸಿದ್ದಪ್ಪ ಸಜ್ಜಗಾರ ಸ್ವಾಗತಿಸಿದರು, ಗಿರೀಶ್ ಕುಬಸದ ವಂದಿಸಿದರು.