Sunday, April 20, 2025
Homeರಾಜ್ಯರಾಜ್ಯಾದ್ಯಂತ ಮದ್ಯದಂಗಡಿಗಳು ಬಂದ್​ !?

ರಾಜ್ಯಾದ್ಯಂತ ಮದ್ಯದಂಗಡಿಗಳು ಬಂದ್​ !?

ಬೆಂಗಳೂರು: ಅಬಕಾರಿ ಇಲಾಖೆಯಲ್ಲಿನ ಭ್ರಷ್ಟಾಚಾರ, ವರ್ಗಾವಣೆ, ಪ್ರಮೋಷನ್​ಗೆ ಸನ್ನದುದಾರರಿಂದ ಲಂಚ ಸ್ವೀಕರಿಸಲಾಗುತ್ತಿದೆ ಎಂಬ ಆರೋಪ ಕೇಳಿ ಬಂದಿದ್ದು, ಈ ಸಂಬಂಧ ಮದ್ಯ ಮಾರಾಟಗಾರರು ನವೆಂಬರ್​ 20ರಂದು ರಾಜ್ಯಾದ್ಯಂತ ಬಾರ್​ಗಳನ್ನು ಬಂದ್​ ಮಾಡಿ ಪ್ರತಿಭಟಿಸಲು ನಿರ್ಧರಿಸಿದ್ದಾರೆ.

ಅಬಕಾರಿ ಇಲಾಖೆಯಲ್ಲಿ ಕೋಟ್ಯಾಂತರ ರೂ.ಗಳ ಲಂಚ ಸ್ವೀಕಾರದ ವಿಷಯ ದೊಡ್ಡ ಮಟ್ಟದಲ್ಲಿ ಚರ್ಚೆ ಆಗುತ್ತಿದೆ. ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಕೇಂದ್ರದ ನಾಯಕರು  ಮತ್ತು ರಾಜ್ಯ ಬಿಜೆಪಿ ಕಾಂಗ್ರೆಸ್​ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸುತ್ತಿದ್ದಾರೆ. ಇದೀಗ ಮದ್ಯ ಮಾರಾಟಗಾರರ ಸಂಘ ಭ್ರಷ್ಟಾಚಾರ ಜೊತೆಗೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ನವೆಂಬರ್ 20ರಂದು ಬಂದ್​ಗೆ ಕರೆ ನೀಡಿದ್ದಾರೆ.

ಈ ಬಗ್ಗೆ ಮಾತನಾಡಿರುವ ರಾಜ್ಯ ಮದ್ಯ ಮಾರಾಟಗಾರರ ಸಂಘದ ಪ್ರದಾನ ಕಾರ್ಯದರ್ಶಿ ಗೋವಿಂದರಾಜ್​, ಅಬಕಾರಿ ಇಲಾಖೆಯಲ್ಲಿ ಲಂಚ ಸ್ವೀಕಾರ ಮಿತಿ ಮೀರಿ ಹೋಗಿದೆ. ಇದನ್ನು ಸಹಿಸಿಕೊಳ್ಳಲು ಸಾದ್ಯವಾಗುತ್ತಿಲ್ಲ. ಹೀಗಾಗಿ ಇದೇ ನವೆಂಬರ್ 20ರಂದು ರಾಜ್ಯಾದ್ಯಂತ ಎಂಎಸ್‌ಐಎಲ್‌ ಹೊರತುಪಡಿಸಿ ಮಿಕ್ಕಿದ ಎಲ್ಲಾ ಮದ್ಯ ಅಂಗಡಿಗಳನ್ನು ಬಂದ್ ಮಾಡಿ ಪ್ರತಿಭಟನೆ ನಡೆಸುವುದಾಗಿ ತಿಳಿಸಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

Most Popular

Recent Comments