Home » News » ಬೇಸಾಯ ಕಾರ್ಯಕ್ರಮದಡಿ ಘಟಕಗಳ ನಿರ್ಮಾಣಕ್ಕೆ ಸಹಾಯಧನದಕ್ಕೆ ಅರ್ಜಿ ಆಹ್ವಾನ..

ಬೇಸಾಯ ಕಾರ್ಯಕ್ರಮದಡಿ ಘಟಕಗಳ ನಿರ್ಮಾಣಕ್ಕೆ ಸಹಾಯಧನದಕ್ಕೆ ಅರ್ಜಿ ಆಹ್ವಾನ..

by CityXPress
0 comments

ಗದಗ: 2025-26 ನೇ ಸಾಲಿನಲ್ಲಿ ತೋಟಗಾರಿಕೆ ಇಲಾಖೆಯಿಂದ ಕೇಂದ್ರ ಪುರಸ್ಕೃತ ರಾಷ್ಟ್ರೀಕೃತ ತೋಟಗಾರಿಕೆ ಮಿಷನ್ ಯೋಜನೆಯಡಿ ಜಿಲ್ಲೆಯಲ್ಲಿ ತೋಟಗಾರಿಕೆ ಬೆಳೆಗಳಿಗೆ‌‌ ಸಹಾಯಧನ ಪಡೆಯಲು‌‌ ಅರ್ಜಿ ಕರೆದಿದ್ದಾರೆ.

ದ್ರಾಕ್ಷೀ, ಮಾವು , ಅಂಜೂರ , ಬಾಳೆ, ನಿಂಬೆ , ಪೇರಲ, ದಾಳಿಂಬೆ ಡ್ರ್ಯಾಗನ್ ಹಣ್ಣು , ಪಪ್ಪಾಯ, ಹುಣಸೆ ಹಣ್ಣುಗಳ ಪ್ರದೇಶ ವಿಸ್ತರಣೆ, ಹೈಬ್ರೀಡ್ ತರಕಾರಿ, ಹೂವು ಪ್ರದೇಶ ವಿಸ್ತರಣೆ, ಔಷಧೀಯ ಮತ್ತು ಸುಗಂಧ ದ್ರವ್ಯ ಬೆಳೆಗಳ ಪ್ರದೇಶ ವಿಸ್ತರಣೆ , ಅನುತ್ಪಾದಕ ತೋಟಗಳ ಆಕಾರ ನಿರ್ವಹಣೆ ಮತ್ತು ಪುನಶ್ಚೇತನ ಕಾರ್ಯಕ್ರಮ , ತೋಟಗಾರಿಕೆಯಲ್ಲಿ ಯಾಂತ್ರೀಕರಣ, ವೈಯಕ್ತಿಕ ನೀರು ಸಂಗ್ರಹಣಾ ಘಟಕ, ಸಂರಕ್ಷಿತ ಬೇಸಾಯ ಕಾರ್ಯಕ್ರಮದಡಿ ಹಸಿರು ಮನೆ ಹಾಗೂ ನೆರಳು ಪರದೆ ಘಟಕಗಳ ನಿರ್ಮಾಣ , ಫಾರ್ಮಗೇಟ್ ಪ್ಯಾಕಹೌಸ್ ಘಟಕ ಹಾಗೂ ಈರುಳ್ಳಿ ಶೇಖರಣಾ ಘಟಕಗಳ ನಿರ್ಮಾಣಕ್ಕೆ ಸಹಾಯಧನದ ಸೌಲಭ್ಯವಿದ್ದು ಆಸಕ್ತ ರೈತರು ಸಂಬಂಧಿಸಿದ ತಾಲ್ಲೂಕು ತೋಟಗಾರಿಕೆ ಕಛೇರಿಗಳಿಗೆ ಸಂಪರ್ಕಿಸಿ ಅರ್ಜಿ ಸಲ್ಲಿಸಲು ಕೋರಿದೆ.

ತೋಟಗಾರಿಕೆ ಉಪ ನಿರ್ದೇಶಕರ ಜಿಲ್ಲಾ ಪಂಚಾಯತ್ ಗದಗ ಇವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ

You may also like

Leave a Comment

Soledad is the Best Newspaper and Magazine WordPress Theme with tons of options and demos ready to import. This theme is perfect for blogs and excellent for online stores, news, magazine or review sites.

Buy Soledad now!

Edtior's Picks

Latest Articles

Website designed by Dreamweb
error: Content is protected by Dreamweb