Home » News » ಪೊಲೀಸರ ಮೇಲೆ ಹಲ್ಲೆ: ಖಾಕಿ ಕೈಯಿಂದ ಎಸ್ಕೇಪ್ ಆಗಲು ಯತ್ನ: ಆರೋಪಿಗೆ ಗುಂಡೇಟು!

ಪೊಲೀಸರ ಮೇಲೆ ಹಲ್ಲೆ: ಖಾಕಿ ಕೈಯಿಂದ ಎಸ್ಕೇಪ್ ಆಗಲು ಯತ್ನ: ಆರೋಪಿಗೆ ಗುಂಡೇಟು!

by CityXPress
1 comment

ಗದಗ: ಪೊಲೀಸರ ಮೇಲೆ ಹಲ್ಲೆ ಮಾಡಿ ಎಸ್ಕೇಪ್ ಆಗಲು ಯತ್ನಿಸಿದ ಆರೋಪಿ ಕಾಲಿಗೆ ಗುಂಡು ಹಾರಿಸಿರೋ ಘಟನೆ, ಗದಗ ಜಿಲ್ಲೆಯ ರೋಣ ತಾಲೂಕಿನ ಕುರಹಟ್ಟಿ ಗ್ರಾಮದ ಬಳಿ ನಡೆದಿದೆ.

ಆರೋಪಿ ಬಗರ್ ಅಲಿ ಇರಾನಿ (27) ಅನ್ನುವಾತನ ಮೇಲೆ ಗುಂಡಿನ ದಾಳಿ ನಡೆದಿದ್ದು, ಪೊಲೀಸರ ಮೇಲೆ ಹಲ್ಲೆ ‌ಮಾಡಿ ಎಸ್ಕೇಪ್ ಆಗಲು ಯತ್ನಿಸಿದಾಗ ಗುಂಡಿನ ದಾಳಿ ನಡೆದಿದೆ.

ಬೆಟಗೇರಿ ಬಡಾವಣೆ ಪೊಲೀಸ್ ಠಾಣೆ ಸಿಪಿಐ ಧೀರಜ್ ಸಿಂಧೆ ಅವರಿಂದ ಗುಂಡಿನ ದಾಳಿ ನಡೆದಿದ್ದು, ಆರೋಪಿ ಬಗರ್ ಅಲಿ ಮೊಣಕಾಲಿಗೆ ಗಾಯವಾಗಿದೆ. ಅದ್ಯ ಗದಗ ಜಿಮ್ಸ್ ಆಸ್ಪತ್ರೆಯಲ್ಲಿ ಆರೋಪಿಗೆ ಚಿಕಿತ್ಸೆ ನೀಡಲಾಗ್ತಿದೆ.

ಘಟನೆಯಲ್ಲಿ, ಬಡಾವಣೆ ಪೊಲೀಸ್ ಠಾಣೆ ಸಿಬ್ಬಂದಿಗಳಾದ ಹನುಮಂತ ಓಲೇಕಾರ, ಅಶೋಕ್ ಗಡದ ಹಲ್ಲೆಗೊಳಲಾಗಿದ್ದಾರೆ. ಈ ಇಬ್ಬರೂ ಪೊಲೀಸರಿಗೂ ರೋಣ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗ್ತಿದೆ.

banner

ಕಳೆದ ಜೂನ್ 28 ರಂದು, ನಗರದ ಹೆಲ್ತ್ ಕ್ಯಾಂಪ್ ಬಳಿ ಗಂಗಾವತಿ ಪೊಲೀಸರ ಮೇಲೆ ಸಿನಿಮೀಯ ರೀತಿಯಲ್ಲಿ ಆರೋಪಿಗಳ ಗುಂಪೊಂದು ಅಟ್ಯಾಕ್ ಮಾಡಿತ್ತು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ, ಪೊಲೀಸರ ಮೇಲೆ ನಡೆದ ಹಲ್ಲೆ ಕೇಸ್ ನಲ್ಲಿ ಆರೋಪಿ ಅರೆಸ್ಟ್ ಆಗಿದ್ದನು.

ಕಳ್ಳತನದ ಆರೋಪದ ಮೇಲೆ ಗಂಗಾವತಿ ಪೊಲೀಸರು ಗದಗನಿಂದ ಆರೋಪಿ ಕರೆದೊಯ್ಯುವಾಗ ಪೊಲೀಸರ ಮೇಲೆ ಹಲ್ಲೆ ಮಾಡಿ ಎಸ್ಕೇಪ್ ಆಗಿದ್ದನು. ಹಲ್ಲೆ ಬಳಿಕ ಆರೋಪಿ ಸ್ಕೂಟಿಯಲ್ಲಿ ಹೊಳೆಆಲೂರ ಗ್ರಾಮಕ್ಕೆ ಎಸ್ಕೇಪ್ ಆಗಿ, ಅಲ್ಲಿಂದ ಟ್ರೈನ್ ಮೂಲಕ‌ ಮಹಾರಾಷ್ಟ್ರಕ್ಕೆ ತೆರಳಿದ್ದನು.

ಈ ಹಿನ್ನೆಲೆ,‌ಗಂಗಾವತಿ ಪೊಲೀಸರ ಮೇಲೆ ಹಲ್ಲೆ ಕೇಸ್ ನಲ್ಲಿ ಬೆಟಗೇರಿ ಬಡಾವಣೆ ಪೊಲೀಸರಿಂದ ಆರೋಪಿಯನ್ನ ಬಂಧಿಸಲಾಗಿತ್ತು.

ಆದರೆ ಇಂದು ಪಂಚನಾಮೆಗೆಂದು ಹೊಳೆಆಲೂರಗೆ ತೆರಳಿ, ವಾಪಾಸ್ ಬರುವಾಗ ಈ ಘಟ‌ನೆ ಜರುಗಿದ್ದು, ರೋಣ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ಜರುಗಿದೆ.

You may also like

1 comment

ಅಶೋಕ November 23, 2024 - 1:06 pm

‌ಪೋಲಿಸರ ಮೇಲೆ ಹಲ್ಲೆ ಮಾಡಲು ಮುಂದಾಗುವಂತಾ ಕಿಡಿಗೇಡಿಗಳನ್ನು ಎನ್ ಕೌಂಟರ ಮಾಡಲು
ಪೋಲಿಸ ಇಲಾಖೆಗೆ ಮುಕ್ತ ಅವಕಾಶ ನೀಡಬೇಕು.

Reply

Leave a Comment

Soledad is the Best Newspaper and Magazine WordPress Theme with tons of options and demos ready to import. This theme is perfect for blogs and excellent for online stores, news, magazine or review sites.

Buy Soledad now!

Edtior's Picks

Latest Articles

Website designed by Dreamweb
error: Content is protected by Dreamweb