Home » News » ಶಾಸಕ ಚಂದ್ರು ಲಮಾಣಿ ಲೋಕಾಯುಕ್ತ ಲಾಕ್ ಹಿನ್ನೆಲೆ: ಒಂದೇ ವೇದಿಕೆಯಲ್ಲಿ ಒಗ್ಗೂಡಿದ ಮಾಜಿ ಶಾಸಕರು..!ಶಿರಹಟ್ಟಿಯಲ್ಲಿ ಮಾಜಿ ಶಾಸಕರ ನೇತೃತ್ವದಲ್ಲಿ ಪ್ರತಿಭಟನೆ – ಮತ್ತೇ ರಂಗೇರಿದ ರಾಜಕೀಯ ಕಣ..!

ಶಾಸಕ ಚಂದ್ರು ಲಮಾಣಿ ಲೋಕಾಯುಕ್ತ ಲಾಕ್ ಹಿನ್ನೆಲೆ: ಒಂದೇ ವೇದಿಕೆಯಲ್ಲಿ ಒಗ್ಗೂಡಿದ ಮಾಜಿ ಶಾಸಕರು..!ಶಿರಹಟ್ಟಿಯಲ್ಲಿ ಮಾಜಿ ಶಾಸಕರ ನೇತೃತ್ವದಲ್ಲಿ ಪ್ರತಿಭಟನೆ – ಮತ್ತೇ ರಂಗೇರಿದ ರಾಜಕೀಯ ಕಣ..!

by CityXPress
0 comments

ಶಿರಹಟ್ಟಿ:
ಗುತ್ತಿಗೆದಾರನಿಂದ ₹5 ಲಕ್ಷ ಕಮೀಷನ್ ಪಡೆದ ಆರೋಪದಡಿ ಶಿರಹಟ್ಟಿ ಬಿಜೆಪಿ ಶಾಸಕ ಡಾ. ಚಂದ್ರು ಲಮಾಣಿ, ಅವರ ಪಿಎಗಳಾದ ಮಂಜು ವಾಲ್ಮೀಕಿ ಹಾಗೂ ಗುರು ಲಮಾಣಿ ಸೇರಿದಂತೆ ಮೂವರು ನ್ಯಾಯಾಂಗ ಬಂಧನಕ್ಕೆ ಒಳಪಟ್ಟಿರುವ ಹಿನ್ನೆಲೆಯಲ್ಲಿ, ಶಿರಹಟ್ಟಿ ವಿಧಾನಸಭಾ ಕ್ಷೇತ್ರದಲ್ಲಿ ರಾಜಕೀಯ ಕಣ ತೀವ್ರವಾಗಿ ಕುದಿಯತೊಡಗಿದೆ.

ಈ ಬೆಳವಣಿಗೆಯ ಬೆನ್ನಲ್ಲೇ, ಇದುವರೆಗೆ ವಿಭಜಿತವಾಗಿದ್ದ ಕಾಂಗ್ರೆಸ್ ಪಕ್ಷದ ಮಾಜಿ ಶಾಸಕರು ಹಾಗೂ ನಾಯಕರು ಒಗ್ಗೂಡಿ, ಶಾಸಕ ಚಂದ್ರು ಲಮಾಣಿ ವಿರುದ್ಧ ತೀವ್ರ ಪ್ರತಿಭಟನೆ ನಡೆಸಿದರು. ಭ್ರಷ್ಟಾಚಾರದ ಗಂಭೀರ ಆರೋಪ ಎದುರಿಸುತ್ತಿರುವ ಶಾಸಕರ ಶಾಸಕ ಸ್ಥಾನವನ್ನು ತಕ್ಷಣವೇ ಅಮಾನತು ಮಾಡಬೇಕು ಹಾಗೂ ಅವರ ವಿಧಾನಸಭಾ ಸದಸ್ಯತ್ವವನ್ನು ರದ್ದುಪಡಿಸಬೇಕೆಂದು ಆಗ್ರಹಿಸಿ, ತಹಶೀಲ್ದಾರರ ಮೂಲಕ ರಾಜ್ಯಪಾಲರಿಗೆ ಮನವಿ ಸಲ್ಲಿಸಿದರು.

ಈ ಪ್ರತಿಭಟನೆಗೆ ಶಿರಹಟ್ಟಿ ಕ್ಷೇತ್ರದ ಕಾಂಗ್ರೆಸ್‌ನ ಮಾಜಿ ಶಾಸಕರಾದ ರಾಮಣ್ಣ ಲಮಾಣಿ, ರಾಮಕೃಷ್ಣ ದೊಡ್ಡಮನಿ ಹಾಗೂ ಕಳೆದ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಸುಜಾತಾ ದೊಡ್ಡಮನಿ ಸೇರಿದಂತೆ ಅನೇಕ ಕಾಂಗ್ರೆಸ್ ನಾಯಕರು ಮುಂಚೂಣಿಯಲ್ಲಿ ನಿಂತಿದ್ದರು.“ಭ್ರಷ್ಟ MLAಗೆ ಧಿಕ್ಕಾರ”, “ಶಾಸಕ ಸ್ಥಾನಕ್ಕೆ ಕೂಡಲೇ ರಾಜೀನಾಮೆ ನೀಡಿ” ಎಂಬ ಘೋಷಣೆಗಳೊಂದಿಗೆ ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು.

ಪ್ರತಿಭಟನಾಕಾರರು ಚಂದ್ರು ಲಮಾಣಿ ಅವರ ಭಾವಚಿತ್ರಕ್ಕೆ ‘X’ ಚಿಹ್ನೆ ಹಾಕಿರುವ ಬ್ಯಾನರ್‌ಗಳನ್ನು ಹಿಡಿದು, “ಜನರ ದುಡ್ಡು ನುಂಗಿದವರಿಗೆ ಜೈಲೇ ಗತಿ” ಎಂಬ ಘೋಷಣೆಗಳನ್ನು ಕೂಗುತ್ತಾ ಪಟ್ಟಣದ ಬೀದಿಗಳಲ್ಲಿ ಮೆರವಣಿಗೆ ನಡೆಸಿದರು. ಹನುಮಂತ ದೇವಸ್ಥಾನದಿಂದ ಆರಂಭವಾದ ಪ್ರತಿಭಟನೆ ಪಟ್ಟಣದ ಪ್ರಮುಖ ರಸ್ತೆಗಳ ಮೂಲಕ ಸಾಗಿದ್ದು, ತಮಟೆ ಬಾರಿಸುವ ಮೂಲಕ ಜನರ ಗಮನ ಸೆಳೆಯಿತು.

banner

ಪ್ರತಿಭಟನೆಯ ಅಂತ್ಯದಲ್ಲಿ ತಹಶೀಲ್ದಾರರಿಗೆ ಮನವಿ ಸಲ್ಲಿಸಿದ ಕಾಂಗ್ರೆಸ್ ನಾಯಕರು, ಭ್ರಷ್ಟಾಚಾರ ಪ್ರಕರಣದಲ್ಲಿ ನ್ಯಾಯಾಂಗ ಬಂಧನದಲ್ಲಿರುವ ಶಾಸಕನಿಗೆ ನೈತಿಕತೆ ಇಲ್ಲದೆ ಶಾಸಕರಾಗಿ ಮುಂದುವರಿಯುವ ಹಕ್ಕಿಲ್ಲ ಎಂದು ವಾದಿಸಿದರು.

ರಾಜ್ಯ ಸರ್ಕಾರ ಹಾಗೂ ಸಂವಿಧಾನಾತ್ಮಕ ಸಂಸ್ಥೆಗಳು ಕೂಡಲೇ ಮಧ್ಯಪ್ರವೇಶ ಮಾಡಿ, ಶಾಸಕ ಚಂದ್ರು ಲಮಾಣಿ ಅವರ ಸದಸ್ಯತ್ವವನ್ನು ರದ್ದುಪಡಿಸಬೇಕು ಎಂದು ಒತ್ತಾಯಿಸಿದರು.

ಒಟ್ಟಾರೆ, ಲೋಕಾಯುಕ್ತ ಪ್ರಕರಣದ ಪರಿಣಾಮವಾಗಿ ಶಿರಹಟ್ಟಿ ಕ್ಷೇತ್ರದಲ್ಲಿ ರಾಜಕೀಯ ವಾತಾವರಣ ತೀವ್ರವಾಗಿ ಬದಲಾಗಿದ್ದು, ಮುಂದಿನ ದಿನಗಳಲ್ಲಿ ಈ ಬೆಳವಣಿಗೆಗಳು ಯಾವ ದಿಕ್ಕು ತಾಳಲಿವೆ ಎಂಬುದನ್ನು ಜನತೆ ಕುತೂಹಲದಿಂದ ಕಾಯುತ್ತಿದ್ದಾರೆ.

You may also like

Leave a Comment

Soledad is the Best Newspaper and Magazine WordPress Theme with tons of options and demos ready to import. This theme is perfect for blogs and excellent for online stores, news, magazine or review sites.

Buy Soledad now!

Edtior's Picks

Latest Articles

Website designed by Dreamweb
error: Content is protected by Dreamweb