Home » News » ಹಸಿರು ಕ್ರಾಂತಿಯ ಹರಿಕಾರ ಡಾ. ಬಾಬು ಜಗಜೀವನ್ ರಾಮ್ ಅವರ 118ನೇ ಜಯಂತ್ಯೋತ್ಸವ ಆಚರಣೆ

ಹಸಿರು ಕ್ರಾಂತಿಯ ಹರಿಕಾರ ಡಾ. ಬಾಬು ಜಗಜೀವನ್ ರಾಮ್ ಅವರ 118ನೇ ಜಯಂತ್ಯೋತ್ಸವ ಆಚರಣೆ

by CityXPress
0 comments

ಗದಗ, ಏಪ್ರಿಲ್ 4: ಹಸಿರು ಕ್ರಾಂತಿಯ ಹರಿಕಾರ, ರಾಷ್ಟ್ರನಾಯಕ ಹಾಗೂ ಭಾರತದ ಮಾಜಿ ಉಪಪ್ರಧಾನಿ ಡಾ. ಬಾಬು ಜಗಜೀವನ್ ರಾಮ್ ಅವರ 118ನೇ ಜಯಂತ್ಯೋತ್ಸವವನ್ನು ಗದಗ ಜಿಲ್ಲಾಡಳಿತದ ವತಿಯಿಂದ ಆಚರಿಸಲು ತೀರ್ಮಾನಿಸಲಾಗಿದೆ.

ಈ ಹಿನ್ನೆಲೆಯಲ್ಲಿ, ಶನಿವಾರ, ಏಪ್ರಿಲ್ 5, 2025 ರಂದು ಬೆಳಿಗ್ಗೆ 11 ಗಂಟೆಗೆ ಗದಗ ಜಿಲ್ಲಾ ಆಡಳಿತದ ಸಭಾಂಗಣದಲ್ಲಿ ಪೂಜಾ ಕಾರ್ಯಕ್ರಮ ಆಯೋಜಿಸಲಾಗಿದೆ. ಜಿಲ್ಲಾಡಳಿತದ ನಿರ್ದೇಶನದಂತೆ ನಡೆಯಲಿರುವ ಈ ಕಾರ್ಯಕ್ರಮದಲ್ಲಿ ಡಾ. ಬಾಬು ಜಗಜೀವನ್ ರಾಮ್ ಅವರ ಸೇವೆ ಮತ್ತು ಕೊಡುಗೆಗಳನ್ನು ಸ್ಮರಿಸಲಾಗುವುದು.

ಈ ಮಹತ್ವದ ಕಾರ್ಯಕ್ರಮಕ್ಕೆ ಗದಗ ಜಿಲ್ಲೆಯ ಗಣ್ಯರು, ಸಾರ್ವಜನಿಕರು ಹಾಗೂ ಸಮಾಜದ ಎಲ್ಲಾ ವರ್ಗದ ಜನರು ಆಗಮಿಸಿ ಭಾಗವಹಿಸಿ, ಜಯಂತ್ಯೋತ್ಸವವನ್ನು ಸ್ಮರಣೀಯವಾಗಿಸಲು ಸಮಾಜ ಕಲ್ಯಾಣ‌ ಇಲಾಖೆಯ ಉಪನಿರ್ದೇಶಕರಾದ, ಮಹೇಶ್ ಪೋತದಾರ ಅವರು ಕೋರಿದ್ದಾರೆ.

You may also like

Leave a Comment

Soledad is the Best Newspaper and Magazine WordPress Theme with tons of options and demos ready to import. This theme is perfect for blogs and excellent for online stores, news, magazine or review sites.

Buy Soledad now!

Edtior's Picks

Latest Articles

Website designed by Dreamweb
error: Content is protected by Dreamweb