Home » News » ಮಕ್ಕಳು ಓದು ಬರಹದ ಜೊತೆಗೆ ಕಲೆ, ಸಾಹಿತ್ಯ, ಸಂಗೀತ, ಕ್ರೀಡೆಯಲ್ಲಿ ಭಾಗವಹಿಸಬೇಕು…!

ಮಕ್ಕಳು ಓದು ಬರಹದ ಜೊತೆಗೆ ಕಲೆ, ಸಾಹಿತ್ಯ, ಸಂಗೀತ, ಕ್ರೀಡೆಯಲ್ಲಿ ಭಾಗವಹಿಸಬೇಕು…!

by CityXPress
0 comments

ಲಕ್ಷ್ಮೇಶ್ವರ: ಭರತನಾಟ್ಯ ಕಲೆ ನಮ್ಮ ದೇಶದ ಸಾಹಿತ್ಯ, ಸಂಗೀತ, ಸಂಸ್ಕೃತಿಯ, ಪರಂಪರೆಯ ಜೀವಾಳವಾಗಿದೆ ಎಂದು ಶಾಸಕ ಡಾ. ಚಂದ್ರು ಲಮಾಣಿ ಹೇಳಿದರು.

ಅವರು ಭಾನುವಾರ ಪಟ್ಟಣದ ಭವಾನಿ ಭರತನಾಟ್ಯ ಹಾಗೂ ವಿವಿಧೋದ್ದೇಶಗಳ ಸಂಸ್ಥೆಯಿಂದ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಯೋಗದಲ್ಲಿ ಶ್ರೀ ವೀರಗಂಗಾಧರ ಜಗದ್ಗುರುಗಳ ಕಲ್ಯಾಣ ಮಂಟಪದಲ್ಲಿ ನಡೆದ ನೃತ್ಯ ಸಂಭ್ರಮ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ವರದಿ : ಪರಮೇಶ ಎಸ್ ಲಮಾಣಿ.

ನಾಡಿನ ಸಂಸ್ಕೃತಿಯ ಪ್ರತೀಕವಾದ ಭರತ ನಾಟ್ಯ ಭಾರತೀಯ ಸಾಂಪ್ರದಾಯಿಕ ಶ್ರೇಷ್ಠ ನೃತ್ಯ ಕಲೆಯಾಗಿದೆ. ಇದು ಮಕ್ಕಳಲ್ಲಿ ಸಂಸ್ಕಾರ, ಸಂಸ್ಕೃತಿ, ದೇವರು, ಧರ್ಮ, ಗುರುಹಿರಿಯರಲ್ಲಿ ವಿಧೇಯತೆ ಜೊತೆಗೆ ಮಾಡುತ್ತದೆ ಎಂದರು. ಮಾನಸಿಕ, ದೈಹಿಕ ಆರೋಗ್ಯವನ್ನುಂಟು

banner

ಗದಗ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರೋಹನ್ ಜಗದೀಶ ಮಾತನಾಡಿ, ಮಕ್ಕಳಿಗೆ ಓದು ಬರಹದ ಜೊತೆಗೆ ಕಲೆ, ಸಾಹಿತ್ಯ, ಸಂಗೀತ, ಕ್ರೀಡೆ ಇತರ ಪಠ್ಯ ಚಟುವಟಿಕೆಗಳಲ್ಲಿನ ಪಾಲ್ಗೊಳ್ಳುವಂತೆ ಮಾಡಬೇಕು. ಅವರಲ್ಲಿನ ಪ್ರತಿಭೆ ಕೌಶಲ್ಯ ಗುರುತಿಸಿ ಪ್ರೋತ್ಸಾಹಿಸಬೇಕು.

ಇತ್ತೀಚಿನ ದಿನಗಳಲ್ಲಿ ಮಕ್ಕಳು ಮೊಬೈಲ್ ಮಕ್ಕಳ ಪ್ರತಿಭೆ ಕಸಿಯುತ್ತಿದೆ. ತಂತ್ರಜ್ಞಾನದ ಪ್ರಭಾವದ ನಡುವೆಯೂ ಮಕ್ಕಳಿಗೆ ನಮ್ಮ ದೇಶದ ಸಾಂಸ್ಕೃತಿಕ ಶ್ರೀಮಂತಿಕೆಯ ಕಲೆ, ಸಂಗೀತ, ಸಾಹಿತ್ಯ, ಹಬ್ಬ, ಉತ್ಸವ, ಆಚರಣೆಗಳನ್ನು ಉಳಿಸಿ-ಬೆಳೆಸಿ ಪ್ರೋತ್ಸಾಹಿಸುವ ಎಲ್ಲರದ್ದಾಗಿದೆ ಎಂದರು. ಜವಾಬ್ದಾರಿ

ಭರತನಾಟ್ಯ ಶಾಲೆಯ ಮುಖ್ಯಸ್ಥರಾದ ವಿದೂಷಿ ಡಾ. ಹೇಮಾ ವಾಘಮೋಡ ಗೌರವಸನ್ಮಾನ ಸ್ವೀಕರಿಸಿ ಮಾತನಾಡಿದರು. ಉದ್ಯಮಿ ಬಸವೇಶ ಮಹಾಂತಶೆಟ್ಟರ, ಮಹಾಂತಶೆಟ್ಟರ ಸುನೀಲ ಗಂಗಾಧರ ಮಾತನಾಡಿದರು. ಮಹಾದೇವಪ್ಪ ಚಕ್ರಸಾಲಿ ಅಧ್ಯಕ್ಷತೆವಹಿಸಿದ್ದರು. ಭರತ ನಾಟ್ಯ ಶಾಲೆಯ ಕಾರ್ಯದರ್ಶಿ ಸರೋಜಾ ಗೌಡರ ಪ್ರಾಸ್ತಾವಿಸಿದರು. ಮೆಣಸಿನಕಾಯಿ, ಮಂಜುನಾಥ ಕೊಕ್ಕರಗುಂದಿ, ಪ್ರವೀಣ ಬೋಮಲೆ, ವಿಜಯ ಕುಂಬಾರ, ವಿಶಾಲ ಬಟಗುರ್ಕಿ, ಜಗದೀಶ ಪಾಟೀಲ, ವೈಭವ ಗೋಗಿ,ಜಗದೀಶ ಆಚಾರ, ಪ್ರಭು ಬೋಮಲೆ ಸೇರಿ ಅನೇಕರಿದ್ದರು. ನವೀನ ಹಿರೇಮಠ ರತ್ನಾ ಕುಂಬಾರ ನಿರೂಪಿಸಿದರು. ಬಳಿಕ ನೃತ್ಯ ಶಾಲೆಯ ಮಕ್ಕಳಿಂದ ನೃತ್ಯ ರೂಪಕ, ನಾಟ್ಯ ಸಂಭ್ರಮ ಮನ ಸೆಳೆಯಿತು.

You may also like

Leave a Comment

Soledad is the Best Newspaper and Magazine WordPress Theme with tons of options and demos ready to import. This theme is perfect for blogs and excellent for online stores, news, magazine or review sites.

Buy Soledad now!

Edtior's Picks

Latest Articles

Website designed by Dreamweb
error: Content is protected by Dreamweb