Sunday, April 20, 2025
Homeರಾಜ್ಯಸಿಲಿಂಡರ್ ಸ್ಫೋಟ: ಆರು ಜನರಿಗೆ ಗಾಯ..! ಸಕಾಲಕ್ಕೆ‌ ಬಾರದ ಅಂಬ್ಯುಲೆನ್ಸ್..!

ಸಿಲಿಂಡರ್ ಸ್ಫೋಟ: ಆರು ಜನರಿಗೆ ಗಾಯ..! ಸಕಾಲಕ್ಕೆ‌ ಬಾರದ ಅಂಬ್ಯುಲೆನ್ಸ್..!

ಗದಗ: ಗದಗ ತಾಲೂಕಿನ ಹೊಸೂರು ಗ್ರಾಮದಲ್ಲಿ ಇಂದು ಮಧ್ಯಾಹ್ನ ಸಿಲಿಂಡರ್ ಸ್ಫೋಟದ ದಾರುಣ ಘಟನೆ ಸಂಭವಿಸಿದೆ. ಈ ಅವಘಡದಲ್ಲಿ 14 ವರ್ಷದ ಶರಣಪ್ಪ ಹಾಲೀನ್ ಸೇರಿ ಆರು ಮಂದಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ತಕ್ಷಣ ಗದಗದ ಜಿಮ್ಸ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

ಸ್ಫೋಟದ ಬಳಿಕ ಸಂಬಂಧಿಕರು ಮತ್ತು ಸ್ಥಳೀಯರು ಕೂಡಲೇ ಆ್ಯಂಬುಲೆನ್ಸ್ ಗೆ ಕರೆ ಮಾಡಿದರು. ಆದರೆ ಆ್ಯಂಬುಲೆನ್ಸ್ ಸಮಯಕ್ಕೆ ಬಂದಿಲ್ಲ ಎಂದು ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದರು. “ಎಷ್ಟೇ ಬಾರಿ ಕರೆ ಮಾಡಿದರೂ ಆ್ಯಂಬುಲೆನ್ಸ್ ಸಮಯಕ್ಕೆ ಬಂದಿಲ್ಲ. ಕೊನೆಗೆ ಬೈಕ್ ಮತ್ತು ಖಾಸಗಿ ವಾಹನಗಳ ಮೂಲಕ ಗಾಯಾಳುಗಳನ್ನು ಆಸ್ಪತ್ರೆಗೆ ಕರೆದುಕೊಂಡು ಹೋಗಬೇಕಾಯಿತು” ಎಂದು ಸ್ಥಳೀಯರು ಆಕ್ರೋಶಗೊಂಡಿದ್ದಾರೆ.

ಸಮಾಚಾರ ತಿಳಿದ ಕೂಡಲೇ ಮುಳಗುಂದ ಪೊಲೀಸ್ ಠಾಣೆಯ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಪ್ರಾಥಮಿಕ ತನಿಖೆ ಪ್ರಾರಂಭವಾಗಿದ್ದು, ಸಿಲಿಂಡರ್ ಸ್ಫೋಟಕ್ಕೆ ಗ್ಯಾಸ್ ಸೋರಿಕೆಯೇ ಕಾರಣ ಎನ್ನಲಾಗಿದೆ.

ಸ್ಥಳೀಯರು ಇಂತಹ ಅನಾಹುತಗಳು ಪುನರಾವೃತ್ತಿಯಾಗದಂತೆ ಅಗ್ನಿ ಸುರಕ್ಷತಾ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ಮನವಿ ಮಾಡಿದ್ದಾರೆ. ಜೊತೆಗೆ ಆ್ಯಂಬುಲೆನ್ಸ್ ಸೇವೆ ಸಮಯಕ್ಕೆ ದೊರೆಯುವಂತೆ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಕೂಡ ಆಗ್ರಹಿಸಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

Most Popular

Recent Comments