Wednesday, May 7, 2025
Homeರಾಜ್ಯಲಂಚ ಪಡೆದು ಸಿಕ್ಕಿಬಿದ್ದ ಗದಗ ವಕ್ಫ್ ಜಿಲ್ಲಾ ಅಧಿಕಾರಿ!

ಲಂಚ ಪಡೆದು ಸಿಕ್ಕಿಬಿದ್ದ ಗದಗ ವಕ್ಫ್ ಜಿಲ್ಲಾ ಅಧಿಕಾರಿ!

ಗದಗ: ಗದಗ ಜಿಲ್ಲೆಯಲ್ಲಿ ಲಂಚ ಸೇವನೆಯ ಪ್ರಕರಣ ಮತ್ತೊಮ್ಮೆ ಬೆಳಕಿಗೆ ಬಂದಿದೆ. ವಕ್ಫ್ ಬೋರ್ಡ್‌ನ ಗದಗ ಜಿಲ್ಲಾ ಅಧಿಕಾರಿ ರೆಹೆತ್ಉಲ್ಲಾ ಪೆಂಡಾರಿ ಅವರು ಮಸೀದಿಗೆ ಅನುದಾನ ಬಿಡುಗಡೆ ಮಾಡಲು ಶಿಫಾರಸ್ಸು ಪತ್ರವನ್ನು ಕಳುಹಿಸುವ ಮೊದಲು ಲಂಚ ಬೇಡುತ್ತಿದ್ದ ಸಂದರ್ಭದಲ್ಲಿ ಲೋಕಾಯುಕ್ತದ ಬಲೆಗೆ ಬಿದ್ದಿದ್ದಾರೆ.

ಮೂಲಗಳ ಪ್ರಕಾರ, ಮುಳಗುಂದದಲ್ಲಿರುವ ಮಸೀದಿಗೆ ಸರ್ಕಾರಿ ಅನುದಾನವನ್ನು ಬಿಡುಗಡೆ ಮಾಡಲು ಶಿಫಾರಸ್ಸು ಪತ್ರವನ್ನು ಸರ್ಕಾರಕ್ಕೆ ರವಾನಿಸಬೇಕಾಗಿತ್ತು. ಆದರೆ ಈ ಪ್ರಕ್ರಿಯೆಗೆ ಸಂಬಂಧಪಟ್ಟಂತೆ ಅಧಿಕಾರಿ ರೆಹೆತ್ಉಲ್ಲಾ ಪೆಂಡಾರಿ ಅವರು ದೂರುದಾರ ಎಸ್.ಎ. ಮಕಾಂದಾರ್ ಅವರಿಂದ ಸಾವಿರ ರೂಪಾಯಿ ಲಂಚವನ್ನು ಕೇಳಿದರೆಂದು ತಿಳಿದು ಬಂದಿದೆ. ಲಂಚದ ಬೇಡಿಕೆಯಿಂದ ಬೇಸತ್ತ ದೂರುದಾರರು ಗದಗ ಲೋಕಾಯುಕ್ತಾಧಿಕಾರಿಗಳಿಗೆ ದೂರು ಸಲ್ಲಿಸಿದ್ದರು.

ದೂರಿನ ಪ್ರಕಾರ ತನಿಖೆ ನಡೆಸಿದ ಲೋಕಾಯುಕ್ತದ ಅಧಿಕಾರಿಗಳು ತಕ್ಷಣ ಕಾರ್ಯಪ್ರವೃತ್ತರಾದರು. ದಿಟ್ಟ ನಡೆ ತೆಗೆದುಕೊಂಡ ಲೋಕಾಯುಕ್ತ ಎಸ್.ಪಿ. ಹನಮಂತರಾಯ ಅವರ ಮಾರ್ಗದರ್ಶನದಲ್ಲಿ ಡಿವೈಎಸ್‌ಪಿ ವಿಜಯ್ ಬಿರಾದಾರ್ ನೇತೃತ್ವದ ತಂಡವು ಕಾರ್ಯಾಚರಣೆ ನಡೆಸಿ, ಅಧಿಕಾರಿಯನ್ನು ಅವರ ಕಚೇರಿಯಲ್ಲೇ ಲಂಚ ಸ್ವೀಕರಿಸುತ್ತಿದ್ದ ಸಂದರ್ಭದಲ್ಲಿ ರೆಡ್ ಹ್ಯಾಂಡ್ ಆಗಿ ಬಂಧಿಸಿದ್ದಾರೆ. ಈ ವೇಳೆ ಪೆಂಡಾರಿ ಅವರಿಂದ ಹಣವನ್ನು ಸ್ವೀಕರಿಸುತ್ತಿದ್ದ ಪ್ರಮಾಣಿಕ ದಾಖಲೆಗಳನ್ನು ಕೂಡ ಪೊಲೀಸರು ವಶಕ್ಕೆ ಪಡೆದಿದ್ದಾರೆ.

ದಾಳಿ ನಂತರ ಸಂಬಂಧಿತ ದಾಖಲೆಗಳ ಪರಿಶೀಲನೆ ನಡೆಯುತ್ತಿದ್ದು, ಹೆಚ್ಚಿನ ತನಿಖೆ ಕೂಡ ಪ್ರಾರಂಭವಾಗಿದೆ. ಪ್ರಕರಣದ ಕುರಿತಂತೆ ಕಾನೂನು ಕ್ರಮ ಕೈಗೊಳ್ಳಲಾಗುತ್ತಿದ್ದು, ಲಂಚ ತೆಗೆದುಕೊಂಡ ಅಧಿಕಾರಿಗಳ ವಿರುದ್ಧ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವ ನಿರೀಕ್ಷೆಯಿದೆ.

RELATED ARTICLES

LEAVE A REPLY

Please enter your comment!
Please enter your name here

Most Popular

Recent Comments