Home » News » ಸರ್ಕಾರ ಬಂಡೆಯಂತೆ ಗಟ್ಟಿಯಾಗಿದೆ: ನನ್ನ ಮತ್ತು ಡಿಕೆಶಿ ನಡುವೆ ಯಾವುದೇ ಬಿಕ್ಕಟ್ಟು ಇಲ್ಲ – ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ

ಸರ್ಕಾರ ಬಂಡೆಯಂತೆ ಗಟ್ಟಿಯಾಗಿದೆ: ನನ್ನ ಮತ್ತು ಡಿಕೆಶಿ ನಡುವೆ ಯಾವುದೇ ಬಿಕ್ಕಟ್ಟು ಇಲ್ಲ – ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ

by CityXPress
0 comments

ಮೈಸೂರು, ಜೂನ್ 30 – “ನನ್ನ ಮತ್ತು ಡಿ.ಕೆ. ಶಿವಕುಮಾರ್ ನಡುವೆ ಯಾವುದೇ ಬಿಕ್ಕಟ್ಟು ಇಲ್ಲ. ನಾವು ಒಟ್ಟಾಗಿ ಕಾರ್ಯನಿರ್ವಹಿಸುತ್ತಿದ್ದೇವೆ. ಈ ಕಾಂಗ್ರೆಸ್ ಸರ್ಕಾರ ಬಂಡೆ ತರ ಐದು ವರ್ಷಗಳ ಕಾಲ ಗಟ್ಟಿಯಾಗಿ ಮುಂದುವರಿಯಲಿದೆ,” ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.

ಮೈಸೂರಿನ ಮಂಡಕಳ್ಳಿ ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ, ಪಕ್ಷದ ಆಂತರಿಕ ಸಂಘರ್ಷಗಳ ಬಗ್ಗೆ ಹರಡುವ ಸುದ್ದಿಗಳು ನಿರಾಧಾರ ಎಂದು ಖಂಡಿಸಿದರು. “ಬಿಜೆಪಿ ನಾಯಕರಿಗೆ ಸುಳ್ಳು ಪ್ರಚಾರ ನಡೆಸುವುದು ಅಭ್ಯಾಸವಾಗಿದೆ. ಅವರು ದಿನವೂ ಬೇರೆ ಬೇರೆ ವದಂತಿಗಳನ್ನು ಹರಡಿ ಜನರಲ್ಲಿ ಗೊಂದಲ ಉಂಟುಮಾಡಲು ಯತ್ನಿಸುತ್ತಿದ್ದಾರೆ. ಆದರೆ ಜನತೆ ಬುದ್ಧಿವಂತರು. ಅವರು ನಿಜವನ್ನು ಅರ್ಥಮಾಡಿಕೊಳ್ಳುವ ಸಾಮರ್ಥ್ಯ ಹೊಂದಿದ್ದಾರೆ,” ಎಂದು ಸಿಎಂ ಸವಾಲು ಹಾಕಿದರು.

ರಾಜ್ಯ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ ಅವರು ಬೆಂಗಳೂರಿಗೆ ಆಗಮಿಸುತ್ತಿರುವ ಸಂದರ್ಭದಲ್ಲಿ, ಕಾಂಗ್ರೆಸ್ ಒಳಜಗಳದ ಮಾತುಗಳು ತೀವ್ರಗೊಂಡಿರುವ ಸಂದರ್ಭದಲ್ಲಿ ಸಿಎಂ ಈ ಹೇಳಿಕೆ ನೀಡಿದ್ದಾರೆ.

ಕೆಆರ್‌ಎಸ್‌ ಜಲಾಶಯಕ್ಕೆ ಬಾಗಿನ ಅರ್ಪಿಸುವ ಮುನ್ನ, ಮೈಸೂರಿನಲ್ಲಿ ಸುದ್ದಿಗೋಷ್ಠಿ ನಡೆಸಿದ ಸಿಎಂ, “ನಮ್ಮ ಆಡಳಿತ ಜನತೆಗೆ ನಿಷ್ಠೆಯಾಗಿದೆ. ಡಿಕೆ ಶಿವಕುಮಾರ್ ನನ್ನನ್ನು ಸಂಪೂರ್ಣವಾಗಿ ಬೆಂಬಲಿಸುತ್ತಿದ್ದಾರೆ. ನಾವು ಮುಖ್ಯಮಂತ್ರಿ ಮತ್ತು ಉಪಮುಖ್ಯಮಂತ್ರಿಗಳು, ಕಾಂಗ್ರೆಸ್‌ ನಾಯಕರಾದಿಯಾಗಿ ಸಮ್ಮಿಲಿತವಾಗಿ ಕಾರ್ಯನಿರ್ವಹಿಸುತ್ತಿದ್ದೇವೆ. ರಾಜ್ಯದ ಅಭಿವೃದ್ಧಿ, ಸಮಾಜದ ಕಲ್ಯಾಣ ಮತ್ತು ಭವಿಷ್ಯದ ಪರಿವರ್ತನೆಯೆ ನಮ್ಮ ಪ್ರಧಾನ ಗುರಿ,” ಎಂದು ತಿಳಿಸಿದರು.

banner

ಕಳೆದ ಕೆಲವು ದಿನಗಳಿಂದ ಕಾಂಗ್ರೆಸ್ ಶಾಸಕರ ಅಸಮಾಧಾನ, ನಿರ್ವಹಣಾ ಶೈಲಿ, ಇಲಾಖೆ ಹಂಚಿಕೆ ಸೇರಿದಂತೆ ಹಲವಾರು ವಿಷಯಗಳಲ್ಲಿ ಪಕ್ಷದೊಳಗಿನ ಅಸಮಾಧಾನ ಎದುರಾಗುತ್ತಿರುವುದಾಗಿ ವರದಿಯಾಗಿತ್ತು. ಇದನ್ನು ಬಗ್ಗುಬಡಿಸಿದ್ದಂತೆ ಸಿದ್ದರಾಮಯ್ಯ ಪ್ರತಿಕ್ರಿಯಿಸಿದ್ದು, ಪಕ್ಷದ ಏಕತೆಯ ಮತ್ತು ಸರ್ಕಾರದ ಸ್ಥಿರತೆಗೆ ಕಠಿಣವಾದ ಸಂದೇಶವನ್ನೇ ನೀಡಿದ್ದಾರೆ.

You may also like

Leave a Comment

Soledad is the Best Newspaper and Magazine WordPress Theme with tons of options and demos ready to import. This theme is perfect for blogs and excellent for online stores, news, magazine or review sites.

Buy Soledad now!

Edtior's Picks

Latest Articles

Website designed by Dreamweb
error: Content is protected by Dreamweb