Home » News » ಡಾ. ಭೀಮಣ್ಣ ಖಂಡ್ರೆ ಅವರ ನುಡಿ ನಮನ ಕಾರ್ಯಕ್ರಮ, ನಾಡಿನ ನೂರಾರು ಗಣ್ಯರು ಭಾಗಿ…!

ಡಾ. ಭೀಮಣ್ಣ ಖಂಡ್ರೆ ಅವರ ನುಡಿ ನಮನ ಕಾರ್ಯಕ್ರಮ, ನಾಡಿನ ನೂರಾರು ಗಣ್ಯರು ಭಾಗಿ…!

by CityXPress
0 comments

ಬೆಂಗಳೂರು: ಇತ್ತೀಚೆಗೆ ಲಿಂಗೈಕ್ಯರಾದ ಮಾಜಿ ಸಚಿವರು, ಶತಾಯುಷಿ ಲೋಕನಾಯಕ ಡಾ. ಭೀಮಣ್ಣ ಖಂಡ್ರೆ ಅವರ ಗೌರವಾರ್ಥ ಫೆಬ್ರವರಿ 14ರಂದು (ಶನಿವಾರ) ಸಂಜೆ ಬೆಂಗಳೂರಿನಲ್ಲಿ ನುಡಿನಮನ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ.
ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ಮತ್ತು ಭಾಲ್ಕಿಯ ಶಾಂತಿವರ್ಧಕ ಶಿಕ್ಷಣ ಸಂಸ್ಥೆಯ ಆಶ್ರಯದಲ್ಲಿ, ಬೆಂಗಳೂರು ಅರಮನೆ ಆವರಣದ ಗೇಟ್ 4ರಲ್ಲಿರುವ ಗಾಯತ್ರಿ ವಿಹಾರದಲ್ಲಿ ಈ ನುಡಿನಮನ ಕಾರ್ಯಕ್ರಮ ನಡೆಯಲಿದೆ.
ಸುತ್ತೂರು ಸಂಸ್ಥಾನದ ಶ್ರೀ ಶಿವರಾತ್ರಿ ದೇಶಿಕೇಂದ್ರ ಮಹಾಸ್ವಾಮೀಜಿ, ತರಳಬಾಳು ಬೃಹನ್ಮಠದ ಡಾ. ಶಿವಮೂರ್ತಿ ಶಿವಾಚಾರ್ಯರು, ಸಿದ್ದಗಂಗಾ ಮಠದ ಶ್ರೀ ಸಿದ್ದಲಿಂಗ ಮಹಾಸ್ವಾಮೀಜಿ, ಭಾಲ್ಕಿ ಹಿರೇಮಠದ ಡಾ. ಬಸವಲಿಂಗ ಪಟ್ಟದ್ದೇವರು ದಿವ್ಯ ಸಾನ್ನಿಧ್ಯ ವಹಿಸಲಿದ್ದಾರೆ.

ರಾಜ್ಯಸಭೆಯ ಪ್ರತಿಪಕ್ಷ ನಾಯಕ ಮಲ್ಲಿಕಾರ್ಜುನ ಖರ್ಗೆ, ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಸಭಾಧ್ಯಕ್ಷ ಯು.ಟಿ. ಖಾದರ್, ಸಭಾಪತಿ ಬಸವರಾಜ ಹೊರಟ್ಟಿ, ಕೇಂದ್ರ ಸಚಿವ ವಿ.ಸೋಮಣ್ಣ, ಮಾಜಿ ಮುಖ್ಯಮಂತ್ರಿಗಳಾದ ಎಂ. ವೀರಪ್ಪ ಮೊಯ್ಲಿ, ಬಿ.ಎಸ್. ಯಡಿಯೂರಪ್ಪ ಹಾಗೂ ಬಸವರಾಜ ಬೊಮ್ಮಾಯಿ ಅವರು ನುಡಿನಮನ ಸಲ್ಲಿಸಲಿದ್ದಾರೆ.

ರಾಜ್ಯ ಸಚಿವ ಸಂಪುಟದ ಸಚಿವರುಗಳು, ಶಾಸಕರು, ಮಾಜಿ ಸಚಿವರು, ಮಾಜಿ ಶಾಸಕರು, ವಿಧಾನಪರಿಷತ್ ಸದಸ್ಯರು ಹಾಗೂ ಮಹಾಸಭಾದ ರಾಜ್ಯ ಘಟಕಗಳ ವಿವಿಧ ರಾಜ್ಯ ಘಟಕಗಳ ಪ್ರತಿನಿಧಿಗಳು ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ.

ಮಹಾಸಭಾದ ರಾಷ್ಟ್ರೀಯ ಅಧ್ಯಕ್ಷರಾಗಿ ಡಾ. ಭೀಮಣ್ಣ ಖಂಡ್ರೆ ಅವರು ಸಭೆಗೆ ಸ್ವಂತ ನಿವೇಶನ ಖರೀದಿಸಿ, ಭವ್ಯ ಕಟ್ಟಡ ನಿರ್ಮಿಸಿ ಸಭಾ ಸ್ವಾವಲಂಬಿಯಾಗುವಂತೆ ಮಾಡಿದ ಮಹತ್ತರ ಕೊಡುಗೆ ಸಮಾಜ ಎಂದಿಗೂ ಮರೆಯುವುದಿಲ್ಲ. ಭಾಲ್ಕಿಯಲ್ಲಿ ನಡೆದ ಶ್ರದ್ಧಾಂಜಲಿ ಸಭೆಯ ಬಳಿಕ ಇದೀಗ ಬೆಂಗಳೂರಿನಲ್ಲಿ ನುಡಿನಮನ ಹಮ್ಮಿಕೊಳ್ಳಲಾಗಿದೆ.

banner

You may also like

Leave a Comment

Soledad is the Best Newspaper and Magazine WordPress Theme with tons of options and demos ready to import. This theme is perfect for blogs and excellent for online stores, news, magazine or review sites.

Buy Soledad now!

Edtior's Picks

Latest Articles

Website designed by Dreamweb
error: Content is protected by Dreamweb