Home » News » ಉದ್ಯೋಗ ಖಾತ್ರಿ ಜಾಬ್ ಕಾರ್ಡ್ ಇ-ಕೆವೈಸಿ ಕಡ್ಡಾಯ – ಇಓ ಧರ್ಮರ ಕೃಷ್ಣಪ್ಪ…

ಉದ್ಯೋಗ ಖಾತ್ರಿ ಜಾಬ್ ಕಾರ್ಡ್ ಇ-ಕೆವೈಸಿ ಕಡ್ಡಾಯ – ಇಓ ಧರ್ಮರ ಕೃಷ್ಣಪ್ಪ…

by CityXPress
0 comments

ಲಕ್ಷ್ಮೇಶ್ವರ: ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆ (ನರೇಗಾ) ಅಡಿಯಲ್ಲಿ ಕೆಲಸ ಮಾಡುತ್ತಿರುವ ತಾಲೂಕಿನ ನರೇಗಾ ಕೂಲಿಕಾರರು ಇ-ಕೆವೈಸಿ ಪ್ರಕ್ರಿಯೆ ಕಡ್ಡಾಯಗೊಳಿಸಿದ್ದು 14 ಗ್ರಾಮ ಪಂಚಾಯಿತಿಗಳ ವ್ಯಾಪ್ತಿಯಲ್ಲಿನ ಜಾಬ್ ಕಾರ್ಡ್ ಹೊಂದಿರುವ ಕೂಲಿಕಾರರು ತಮ್ಮ ಇ-ಕೆ ವೈಸಿ ಪ್ರಕ್ರಿಯೆಯನ್ನು ತಕ್ಷಣ ಪೂರ್ಣಗೊಳಿಸಬೇಕೆಂದು ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ ಧರ್ಮರ ಕೃಷ್ಣಪ್ಪ ಕರೆ ನೀಡಿದ್ದಾರೆ.

ಲಕ್ಷ್ಮೇಶ್ವರ ಸುದ್ದಿ: ಪರಮೇಶ ಎಸ್ ಲಮಾಣಿ

ಗ್ರಾಮೀಣಾಭಿವೃದ್ಧಿ ಆಯುಕ್ತಾಲಯದಿಂದ ಬಂದ ಸೂಚನೆಯ ಮೇರೆಗೆ ಸೆಪ್ಟಂಬರ್ 30,2025 ರೊಳಗಾಗಿ ಎನ್ ಎಂ ಎಂ ಎಸ್ (ನ್ಯಾಷನಲ್ ಮೊಬೈಲ್ ಮಾನಿಟರಿಂಗ್ ಸಿಸ್ಟಮ್) ಇ-ಕೆವೈಸಿ ಪ್ರಕ್ರಿಯೆ ಕಡ್ಡಾಯವಾಗಿದೆ ಆದರೆ ಲಕ್ಷ್ಮೇಶ್ವರ ತಾಲೂಕಿನಲ್ಲಿ ಇನ್ನೂ ಹೆಚ್ಚಿನ ಕೂಲಿಕಾರರು ಈ ಪ್ರಕ್ರಿಯೆ ಪೂರ್ಣಗೊಳಿಸದಿರುವುದರಿಂದ ತಾಲೂಕು ಪಂಚಾಯಿತಿಯ ಐಇಸಿ ಚಟುವಟಿಕೆಗಳ ಮೂಲಕ ವ್ಯಾಪಕ ಜಾಗೃತಿ ಕಾರ್ಯಕ್ರಮಗಳು ಹಮ್ಮಿಕೊಳ್ಳಲು ಸೂಚಿಸಲಾಗಿದೆ.

ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು ಮತ್ತು ಐಇಸಿ ಚಟುವಟಿಕೆಗಳ ಮೂಲಕ ಗ್ರಾಮಸ್ಥರಿಗೆ ಇ ಕೆ ವೈ ಸಿ ಯ ಮಹತ್ವ ತಿಳಿಸಲಾಗುತ್ತಿದೆ ಕಾರ್ಮಿಕರು ತಮ್ಮ ಜಾಬ್ ಕಾರ್ಡ್ ಮತ್ತು ಆಧಾರ್ ಕಾರ್ಡ್ ಸಹಿತವಾಗಿ ಗ್ರಾಮ ಪಂಚಾಯಿತಿ ಕಚೇರಿಗೆ ಅಥವಾ ಆಧಾರ್ ಕೇಂದ್ರಗಳಿಗೆ ಭೇಟಿ ನೀಡಿ ಅಕ್ಟೋಬರ್ 20ರ ರೊಳಗಾಗಿ ಇ ಕೆ ವೈ ಸಿ ಪ್ರಕ್ರಿಯೆ ಪೂರ್ಣಗೊಳಿಸಬೇಕಾಗಿದೆ ಎಂದರು.

banner

ಇ-ಕೆವೈಸಿ ಪ್ರಕ್ರಿಯೆ ಪೂರ್ಣಗೊಳಿಸಿದರೆ ಕೂಲಿ ಪಾವತಿಯಲ್ಲಿ ವೇಗ ಮತ್ತು ಪಾರದರ್ಶಕತೆ ಹೆಚ್ಚುತ್ತದೆ ಜೊತೆಗೆ ಕಾರ್ಮಿಕರ ಹಾಜರಾತಿಯನ್ನು ಮುಖ ಆಧಾರಿತ ತಂತ್ರಾಂಶದ ಮೂಲಕ ಎನ್ ಎಂ ಎಂ ಎಸ್ ಅಪ್ಲಿಕೇಶನ್ ನಲ್ಲಿ ನಿಖರವಾಗಿ ದಾಖಲಿಸಬಹುದು ಇದು ನರೇಗಾ ಯೋಜನೆಯ ವಿಶ್ವಾಸಾರ್ಹತೆ ಮತ್ತು ಪರಿಣಾಮಕಾರಿತೆಯನ್ನು ಹೆಚ್ಚಿಸುತ್ತದೆ. ಸದ್ಯದಲ್ಲೇ ಎನ್ ಎಂ ಎಂ ಎಸ್ ಅಪ್ಲಿಕೇಶನ್ ನಲ್ಲಿ ಕಾರ್ಮಿಕರ ಫೋಟೋ ಸೆರೆಹಿಡಿದು ಆಧಾರ್ ಸಂಖ್ಯೆಯೊಂದಿಗೆ ಮುಖ ಹೊಂದಾಣಿಕೆ ಮೂಲಕ ಹಾಜರಾತಿ ದೃಢಪಡಿಸಲಾಗುತ್ತಿದೆ.

ಇ-ಕೆವೈಸಿ ಪೂರ್ಣಗೊಳಸಿದ ಕಾರ್ಮಿಕರ ಹಾಜರಾತಿಯನ್ನು ಮುಂದಿನ ದಿನಗಳಲ್ಲಿ ಪರಿಗಣಿಸಲಾಗುವುದಿಲ್ಲ ಎಂದು ಕಾರ್ಯನಿರ್ವಾಹಕ ಅಧಿಕಾರಿಗಳು ತಿಳಿಸಿದರು.

ಕೋಟ್:01

ಲಕ್ಷ್ಮೇಶ್ವರ ತಾಲೂಕಿನ ಒಟ್ಟು 14 ಗ್ರಾಮ ಪಂಚಾಯಿತಿಗಳಲ್ಲಿ 18146 ಕುಟುಂಬಗಳಿದ್ದು 41544 ನೋಂದಣಿಯಾದ ಕೂಲಿಕಾರರು ಇದ್ದು ಅದರಲ್ಲಿ 29136 ಸಕ್ರಿಯ ಕೂಲಿಕಾರರು ಇರುತ್ತಾರೆ ಇವರೆಲ್ಲರೂ ಇ-ಕೆವೈಸಿ ಮಾಡಿಕೊಳ್ಳಲು ತಿಳಿಸಿರುತ್ತಾರೆ. ತಾಲೂಕಿನಲ್ಲಿ ಸಾಮೂಹಿಕ ಹಾಗೂ ವೈಯಕ್ತಿಕ ಕಾಮಗಾರಿಗಳ ಮೂಲಕ ಕೂಲಿಕಾರರಿಗೆ 100 ದಿನಗಳ ಕನಿಷ್ಠ ಉದ್ಯೋಗ ಒದಗಿಸಲಾಗುತ್ತಿದ್ದು ಸರ್ಕಾರದ ಈ ಮಹತ್ವಕಾಂಕ್ಷಿ ಯೋಜನೆಯ ಯಶಸ್ವಿ ಅನುಷ್ಠಾನಕ್ಕಾಗಿ ಎಲ್ಲಾ ಕಾರ್ಮಿಕರು ತಕ್ಷಣ ಇ ಕೆ ವೈ ಸಿ ಪ್ರಕ್ರಿಯೆ ಪೂರ್ಣಗೊಳಿಸಬೇಕು.


ಧರ್ಮರ ಕೃಷ್ಣಪ್ಪ ಇಓ ತಾಲೂಕ ಪಂಚಾಯಿತಿ ಲಕ್ಷ್ಮೇಶ್ವರ.

ಕೋಟ್-2
ಇ-ಕೆವೈಸಿ ಸಂಬಂಧವಾಗಿ ತಾಲೂಕಿನ ಎಲ್ಲಾ ಗ್ರಾಮ ಪಂಚಾಯಿತಿಗಳಲ್ಲಿ ಸ್ವಚ್ಛತಾ ವಾಹಿನಿ, ಡಂಗೂರ ಸಾರುವ ಮೂಲಕ ಪ್ರಚಾರಪಡಿಸಲಾಗಿದೆ ಎಲ್ಲಾ ಕೂಲಿಕಾರ್ಮಿಕರು ಗ್ರಾಮ ಪಂಚಾಯಿತಿಗೆ ತೆರಳಿ ಗ್ರಾಮ ಪಂಚಾಯತ್ ಡಿ ಇ ಓ,ಬಿ ಎಫ್ ಟಿ ಜಿಕೆಎಂ, ಟಿ ಆರ್ ಎಂ, ಗ್ರಾಮ ಪಂಚಾಯತ್ ಸಿಬ್ಬಂದಿರವರನ್ನು ಸಂಪರ್ಕಿಸಿ ಇ-ಕೆವೈಸಿ ಮಾಡಿಸಿಕೊಳ್ಳಬೇಕಾಗಿದೆ.

ಮಂಜುನಾಥ್ ಸ್ವಾಮಿ ಹೆಚ್ ಎಂ
ತಾಲೂಕು ಐ ಇ ಸಿ ಸಂಯೋಜಕರು ಲಕ್ಷ್ಮೇಶ್ವರ.

You may also like

Leave a Comment

Soledad is the Best Newspaper and Magazine WordPress Theme with tons of options and demos ready to import. This theme is perfect for blogs and excellent for online stores, news, magazine or review sites.

Buy Soledad now!

Edtior's Picks

Latest Articles

Website designed by Dreamweb
error: Content is protected by Dreamweb