16
ಕೊಪ್ಪಳ: ಸದ್ಯ ರಾಜ್ಯ ಸರ್ಕಾರದಲ್ಲಿ ಕೆಲವು ದಿನಗಳಿಂದ ಸಚಿವ ಸಂಪುಟ ಪುನರ್ ರಚನೆಯಾಗುವ ಚರ್ಚೆ ಜೋರಾಗಿತ್ತು. ಸಿಎಂ ಸಿದ್ಧರಾಮಯ್ಯರನ್ನ ಈ ಬಗ್ಗೆ ಮಾಧ್ಯಮ ಪ್ರತಿನಿಧಿಗಳು ಪ್ರಶ್ನಿಸಿದಾಗ, ಯಾವುದೇ ಪುನರ್ ರಚನೆಯೂ ಇಲ್ಲ ಎಂದಿದ್ದರು. ಈ ಮಧ್ಯೆ ಕೊಪ್ಪಳ ಸಂಸದರಾದ ಕೆ ರಾಜಶೇಖರ್ ಹಿಟ್ನಾಳ ನಗರದಲ್ಲಿ ಪತ್ರಿಕಾಗೋಷ್ಠಿ ಏರ್ಪಡಿಸಿ,ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಸಚಿವ ಸಂಪುಟ ಪುನರ್ ರಚನೆಯಾದರೆ, ಕೊಪ್ಪಳದ ಕೆ ರಾಘವೇಂದ್ರ ಹಿಟ್ನಾಳ ಮತ್ತು ಯಲಬುರ್ಗಾ ಶಾಸಕರಾದ ಬಸವರಾಜ್ ರಾಯರೆಡ್ಡಿ ಸಚಿವರಾಗಲಿ ಎಂದು ಹೇಳಿದ್ದಾರೆ.