Home » News » ಲಕ್ಷ್ಮೇಶ್ವರ ತಾಲೂಕಿನಾದ್ಯಂತ ಮಳೆಗೆ ಜನಜೀವನ ಅಸ್ತವ್ಯಸ್ತ!

ಲಕ್ಷ್ಮೇಶ್ವರ ತಾಲೂಕಿನಾದ್ಯಂತ ಮಳೆಗೆ ಜನಜೀವನ ಅಸ್ತವ್ಯಸ್ತ!

by CityXPress
0 comments

ಲಕ್ಷ್ಮೇಶ್ವರ: ಕಳೆದೊಂದು ತಿಂಗಳಿನಿಂದ ಪಟ್ಟಣ ಸೇರಿದಂತೆ ತಾಲೂಕಿನಾದ್ಯಂತ ನಿರಂತರ ಮಳೆ ಸುರಿಯುತ್ತಿದ್ದು, ಜನಜೀವನ ಸಂಪೂರ್ಣ ಅಸ್ತವ್ಯಸ್ತವಾಗಿದೆ.

ಲಕ್ಷ್ಮೇಶ್ವರ ಸುದ್ದಿ: ಪರಮೇಶ ಲಮಾಣಿ.

ಲಕ್ಷ್ಮೇಶ್ವರ ತಾಲೂಕಿನಾದ್ಯಂತ ನಿರಂತರ ವಿಪರೀತ ಶೀತಗಾಳಿಯೊಂದಿಗೆ ಮಳೆ ಸುರಿಯುತ್ತಿದ್ದು, ಮಲೆನಾಡ ವಾತಾವರಣ ನಿರ್ಮಾಣವಾಗಿದೆ.

ಆಶ್ಲೇಷಾ ಮಳೆ ಬಳಿಕ ಮಾಘ ಆ. 17 ರಿಂದ ಪ್ರತಿ ದಿನ ಬಿಟ್ಟು ಬಿಡದೆ ಸುರಿಯುತ್ತಿದ್ದು, ತಗ್ಗು ಪ್ರದೇಶಗಳು ಸಂಪೂರ್ಣ ಜಲಾವೃತಗೊಂಡಿವೆ. ವಿಪರೀತ ತಂಪುಗಾಳಿ ಬೀಸುತ್ತಿದ್ದು ತಾಲೂಕಿನ ಜನತೆ ಮನೆ ಬಿಟ್ಟು ಆಚೆ ಬರದಂತಾಗಿ, ಮಕ್ಕಳು, ವಯೋವೃದ್ಧರು ಅನಾರೋಗ್ಯಕ್ಕೆ ತುತ್ತಾಗುವಂತಾಗಿದೆ.

banner

ಹದಗೆಟ್ಟ ರಸ್ತೆಗಳು : ಪಟ್ಟಣದ ರಸ್ತೆಗಳು ಸೇರಿದಂತೆ ಗ್ರಾಮೀಣ ರಸ್ತೆಗಳು ಸಂಪೂರ್ಣ ಹದಗೆಟ್ಟು ರಸ್ತೆಗಳಲ್ಲಿ ಮೊಣಕಾಲುದ್ದು ತಗ್ಗು-ಗುಂಡಿಗಳು ಬಿದ್ದು ವಾಹನ ಸವಾರರಿಗೆ ಯಮ ಸ್ವರೂಪಿಯಾಗಿ, ಕೈಯಲ್ಲಿ ಜೀವ ಹಿಡಿದು ಸಂಚರಿಸುಂವತಾಗಿದೆ. ರಸ್ತೆಗಳು ಸಂಪೂರ್ಣ ಕೆಸರುಮಯವಾಗಿದ್ದು, ಮಹಿಳೆಯರು, ಮಕ್ಕಳು, ವಯೋವೃದ್ಧರು ಸಂಚರಿಸಲು ಸಾಧ್ಯವಾಗದಂತಹ ಸ್ಥಿತಿಗೆ ತಲುಪಿದ್ದು ರಸ್ತೆಗಳ ಅಭಿವೃದ್ಧಿಗೆ ಸಾರ್ವಜನಿಕರು ಒತ್ತಾಯಿಸುತ್ತಿದ್ದಾರೆ.

ಬೆಳೆಗಳು ಜಲಾವೃತ:

ನಿತ್ಯ ಸುರಿಯುತ್ತಿರುವ ಮಳೆಯಿಂದ ಮುಂಗಾರು ಹಂಗಾಮಿನಲ್ಲಿ ಬಿತ್ತನೆ ಮಾಡಿದ ಶೇಂಗಾ, ಗೋವಿನ ಜೋಳ, ಬಿಟಿ ಹತ್ತಿ ಇನ್ನಿತರ ಬೆಳೆಗಳು ಜಲಾವೃತಗೊಂಡಿದ್ದು, ತೇವಾಂಶ ಹೆಚ್ಚಾಗಿ ಬೆಳೆಗಳಿಗೆ ಹಾನಿಯಾಗುವ ಆತಂಕ ರೈತರಲ್ಲಿ ಮೂಡಿದೆ.
ಈಗಾಗಲೇ ಕಟಾವಿನ ಹಂತಕ್ಕೆ ಬಂದಿರುವ ಹೆಸರು ಮಳೆ ನೀರಲ್ಲಿ ನಿಂತಿದ್ದು, ಬೆಳೆ ರಕ್ಷಣೆ ಕಷ್ಟ ಸಾಧ್ಯ ಎನ್ನುವಂತಾಗಿದೆ. ಇದೇ ರೀತಿ ಮಳೆ ಮುಂದುವರಿದರೆ ಹೆಸರು ಸಂಪೂರ್ಣ ನಾಶವಾಗಿ, ರೈತರ ಆರ್ಥಿಕತೆಗೆ ದೊಡ್ಡ ಪೆಟ್ಟು ನೀಡುತ್ತದೆ, ಸಾಲ ಸೂಲ ಮಾಡಿ ಬೆಳೆದ ಬೆಳೆಯುವ ಕಟಾವಿನ ಹಂತಕ್ಕೆ ಬಂದು ನಿಂತ ಬೆಳೆಯುವ ಸಂಪೂರ್ಣ ನೀರಲ್ಲಿ ನಿಂತು ನಾಶವಾಗುತ್ತಿರುವುದನ್ನು ಕಂಡ ರೈತರ ಕಣ್ಣಂಚಲ್ಲಿ ನೀರು ತುಂಬಿ ಬರುತ್ತದೆ, ಕಷ್ಟಪಟ್ಟು ಹೊಲದಲ್ಲಿ ದುಡಿದು ಬೆಳೆದ ಬೆಳೆ ಅಕಾಲಿಕ ಮಳೆಯಿಂದ ಸಂಪೂರ್ಣ ನಾಶವಾಗುತ್ತಿರುವುದು ರೈತರನ್ನು ಸಂಕಷ್ಟಕ್ಕೆ ದುಡಿದೆ.

ಬೆಳೆ ಪರಿಹಾರಕ್ಕೆ ಆಗ್ರಹ:

ನಿರಂತರ ಮಳೆಯಿಂದ ತಗ್ಗು ಪ್ರದೇಶದ ಹೊಲಗಳಲ್ಲಿ ಬೆಳೆದ ಬೆಳೆಗಳು ತೇವಾಂಶ ಹೆಚ್ಚಾಗಿ ನಾಶವಾಗುತ್ತಿವೆ. ಕಳೆದೆರಡು ವರ್ಷದಿಂದ ಅತಿವೃಷ್ಟಿ, ಅನಾವೃಷ್ಟಿಯಿಂದ ಕಷ್ಟಪಟ್ಟು ಬೆಳೆದ ಬೆಳೆಗಳು ಕೈಗೆ ಬಾರದಂತಾಗಿದ್ದು, ರೈತರು ಆರ್ಥಿಕವಾಗಿ ಸಂಕಷ್ಟಕ್ಕೀಡಾಗಿದ್ದು, ಸರ್ಕಾರ ಕೂಡಲೇ ಪರಿಹಾರ ಒದಗಿಸಬೇಕು ಎಂಬುದು ರೈತರ ಆಗ್ರಹವಾಗಿದೆ. ನಿರಂತರ ಮಳೆಯಿಂದ ತೇವಾಂಶ ಹೆಚ್ಚಾಗಿ ಬೆಳೆಗಳು ನಾಶವಾಗುತ್ತಿವೆ. ಸರ್ಕಾರ ರೈತರ ಸಂಕಷ್ಟವನ್ನು ಅರಿತು ಕೂಡಲೇ ಪರಿಹಾರ ಒದಗಿಸಲು ಕ್ರಮ ಕೈಗೊಳ್ಳಬೇಕು ಎಂದು ರೈತ ಸುರೇಶ ಮಾಳಗಿಮನಿ ಆಗ್ರಹಿಸಿದ್ದಾರೆ.

You may also like

Leave a Comment

Soledad is the Best Newspaper and Magazine WordPress Theme with tons of options and demos ready to import. This theme is perfect for blogs and excellent for online stores, news, magazine or review sites.

Buy Soledad now!

Edtior's Picks

Latest Articles

Website designed by Dreamweb
error: Content is protected by Dreamweb