Home » News » ಕಾಂತಾರ-2 ಚಿತ್ರತಂಡಕ್ಕೆ ಶಾಕ್: ಚಿತ್ರಿಕರಣ ಸಮಯದಲ್ಲಿ ಮಾಡಿದ ಎಡವಟ್ಟು!

ಕಾಂತಾರ-2 ಚಿತ್ರತಂಡಕ್ಕೆ ಶಾಕ್: ಚಿತ್ರಿಕರಣ ಸಮಯದಲ್ಲಿ ಮಾಡಿದ ಎಡವಟ್ಟು!

by CityXPress
0 comments

ಕಾಂತಾರ -2 ಚಿತ್ರತಂಡಕ್ಕೆ ವಿಘ್ನ ಎದುರಾಗಿದೆ. ಕಾಂತಾರ-2 ಚಿತ್ರತಂಡ ಷರತ್ತು ಉಲ್ಲಂಘಿಸಿರುವ ಬಗ್ಗೆ ಪರಿಶೀಲಿಸುವಂತೆ ಅರಣ್ಯ ಸಚಿವ ಈಶ್ವರ್ ಖಂಡ್ರೆ ಅಧಿಕಾರಿಗಳಿಗೆ ಸೂಚಿಸಿದ್ದಾರೆ.

ಚಿತ್ರೀಕರಣದ ವೇಳೆ ಷರತ್ತು ಉಲ್ಲಂಘಿಸಿದ ದೂರು ಕೇಳಿ ಬಂದ ಹಿನ್ನೆಲೆ ಈ ಅದೇಶ ನೀಡಿದ್ದಾರೆ. ಒಂದು ವೇಳೆ ವನ್ಯಜೀವಿಗಳಿಗೆ ಅಥವಾ ಸಸ್ಯ ಸಂಕುಲಕ್ಕೆ ಚಿತ್ರೀಕರಣದ ವೇಳೆ ಯಾವುದೇ ಹಾನಿಯಾಗಿದ್ದಲ್ಲಿ ಕೂಡಲೇ ಚಿತ್ರೀಕರಣ ಸ್ಥಗಿತಗೊಳಿಸಲು ಕ್ರಮ ಕೈಗೊಳ್ಳುವಂತೆ ಸಚಿವ ಖಂಡ್ರೆ ಖಡಕ್ ಆದೇಶ ಮಾಡಿದ್ದಾರೆ. ಈ ಮೂಲಕ ಚಿತ್ರತಂಡಕ್ಕೆ ಬಿಗ್ ಶಾಕ್ ನೀಡಿದ್ದಾರೆ.

ನಿರ್ದೇಶಕ ಹಾಗೂ ನಟ ರಿಷಬ್ ಶೆಟ್ಟಿ ಅಭಿನಯದ ಸೀಕ್ವೆಲ್ ಕಾಂತಾರ-2 ಅಕ್ಟೋಬರ್ 2 ನೇ 2025 ರಂದು ವಿಶ್ವದಾದ್ಯಂತ ಬಿಡುಗಡೆ ಅಗಲು ಸಜ್ಜಾಗಿದೆ.ಆದರೆ ಚಿತ್ರೀಕರಣದ ಹೆಸರಿನಲ್ಲಿ ಅರಣ್ಯ ಪ್ರದೇಶಕ್ಕೆ ಹಾನಿ ಮಾಡಲಾಗಿದೆ ಎಂಬ ಆರೋಪ ಕೇಳಿಬಂದಿದೆ.

ಈ ಹಿನ್ನೆಲೆ ಚಿತ್ರೀಕರಣ ನಡೆಯುತ್ತಿರುವ ಸಕಲೇಶಪುರ ತಾಲ್ಲೂಕಿನ ಗವಿಗುಡ್ಡಕ್ಕೆ ಎಸಿಎಫ್ ಸತೀಶ್ ಭೇಟಿ ನೀಡಿ ಪರಿಶೀಲಿಸಿದ್ದಾರೆ.ಕೆಲವೊಂದು ನಿಯಮಗಳನ್ನು ಚಿತ್ರೀಕರಣದ ವೇಳೆ ಉಲ್ಲಂಘಿಸಿರುವುದು ಕಂಡುಬಂದಿದ್ದು, ಮೇಲಾಧಿಕಾರಿಗಳಿಗೆ ವರದಿ ಮಾಡುವುದಾಗಿ ಅವರು ತಿಳಿಸಿದ್ದಾರೆ.

banner

ಕಾಂತಾರ-2 ಸಿನಿಮಾದ ಚಿತ್ರೀಕರಣಕ್ಕಾಗಿ ಗೋಮಾಳ ಜಾಗಕ್ಕಾಗಿ ಪರವಾನಿಗೆ ಪಡೆದುಕೊಂಡಿರುವ ಅರಣ್ಯ ಜಾಗದಲ್ಲಿ ಮರಗಳನ್ನು ಕಡಿದು, ಪರಿಸರಕ್ಕೆ ಹಾನಿ ಮಾಡಿರುವ ಆರೋಪ ಕೇಳಿ ಬಂದಿದೆ. ಈ ಸಿನಿಮಾ ಚಿತ್ರೀಕರಣಕ್ಕೆ ಯಾವೆಲ್ಲಾ ಪರವಾನಿಗೆ ನೀಡಿದ್ದಾರೆ ಎಂಬುವುದರ ಬಗ್ಗೆ ಅರಣ್ಯ ಬಹಿರಂಗಪಡಿಸಬೇಕು. ಕೂಡಲೇ ಚಿತ್ರೀಕರಣ ಸ್ಥಗಿತಗೊಳಿಸಿ ಪರಿಸರ ಉಳಿಸುವ ನಿಟ್ಟಿನಲ್ಲಿ ತಾಲೂಕು ಆಡಳಿತ ಮುಂದಾಗಬೇಕು. ಇಲ್ಲವಾದರೆ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ಮಾಡುವುದಾಗಿ ಸ್ಥಳೀಯರು ಎಚ್ಚರಿಕೆ ನೀಡಿದ್ದರು.

You may also like

Leave a Comment

Soledad is the Best Newspaper and Magazine WordPress Theme with tons of options and demos ready to import. This theme is perfect for blogs and excellent for online stores, news, magazine or review sites.

Buy Soledad now!

Edtior's Picks

Latest Articles

Website designed by Dreamweb
error: Content is protected by Dreamweb