ಗ್ಯಾರಂಟಿ ಕಾರಣದಿಂದ ಸಿದ್ದರಾಮಯ್ಯ ಸರ್ಕಾರ ಈಗಾಗಲೇ ದಿವಾಳಿಯಾಗಿದೆ. ಅವರಿಗೆ ಅಭಿವೃದ್ಧಿಗೆ ಅನುದಾನ ಕೊಡಲು ಆಗುತ್ತಿಲ್ಲ. ಹೀಗಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ 50, ಕೋಟಿ 100 ಕೋಟಿ ಆಫರ್ ಬಗ್ಗೆ ಮಾತಾನಾಡುತ್ತಿದ್ದಾರೆ. ಇನ್ನು ಸಿದ್ದರಾಮಯ್ಯ ಅವರು ಸಿಎಂ ಸ್ಥಾನಕ್ಕೆ ಯಾವ ಕ್ಷಣದಲ್ಲಿ ಬೇಕಾದರೂ ರಾಜೀನಾಮೆ ಕೊಡಬಹುದು. ಕಾಂಗ್ರೆಸ್ನಲ್ಲಿ ಸಿಎಂ ಹುದ್ದೆಗೆ ಪೈಪೋಟಿ ನಡೆಯುತ್ತಿದೆ. ಕೆಲ ಶಾಸಕರೇ ಅನುದಾನದ ವಿಚಾರವಾಗಿ ಮಾತಾನಾಡುತ್ತಿದ್ದಾರೆ. ಹೀಗಾಗಿ ಯಾವ ಕ್ಷಣದಲ್ಲಿ ಆದರೂ ಸಿಎಂ ರಾಜೀನಾಮೆ ಕೊಡಬಹುದು ಎಂದು ಸಿಎಂ ಸಿದ್ದರಾಮಯ್ಯ ವಿರುದ್ದ ಬಿವೈ ವಿಜಯೇಂದ್ರ ವಾಗ್ದಾಳಿ ನಡೆಸಿದ್ದಾರೆ.
ಸಿದ್ದರಾಮಯ್ಯ ಯಾವ ಕ್ಷಣದಲ್ಲಾದರೂ ರಾಜೀನಾಮೆ ಕೊಡಬಹುದು:ವಿಜಯೇಂದ್ರ
