Headlines

ಭಾರತೀಯರನ್ನು ದುರ್ಬಲಗೊಳಿಸುತ್ತಿದೆ ಹವಾಮಾನ ಬದಲಾವಣೆ !?

ಬಾಕು(ಅಜೆರ್‌ಬೈಜಾನ್): ಹವಾಮಾನ ಬದಲಾವಣೆಯ ಪರಿಣಾಮಗಳಿಂದಾಗಿ ಎಲ್ಲ ಭಾರತೀಯರು ದುರ್ಬಲರಾಗಿದ್ದಾರೆ ಎಂದು ವಿಶ್ವ ಆರೋಗ್ಯ ಸಂಸ್ಥೆಯ ಮಾಜಿ ಮುಖ್ಯ ವಿಜ್ಞಾನಿ ಡಾ.ಸೌಮ್ಯಾ ಸ್ವಾಮಿನಾಥನ್‌ ಹೇಳಿದ್ದಾರೆ.

ದೇಶದಲ್ಲಿ ಆರೋಗ್ಯ, ಲಿಂಗ ಮತ್ತು ಆರ್ಥಿಕ ಸ್ಥಿರತೆಯ ಪರಿಣಾಮಗಳನ್ನು ಪರಿಹರಿಸಲು ಕ್ರಾಸ್‌‍-ಮಿನಿಸ್ಟ್ರಿ ಮತ್ತು ಅಂತಾರಾಷ್ಟ್ರೀಯ ಸಹಯೋಗದ ತುರ್ತು ಅಗತ್ಯವನ್ನು ಅವರು ಒತ್ತಿ ಹೇಳಿದ್ದಾರೆ. ಮಹಿಳೆಯರು ಮತ್ತು ಮಕ್ಕಳು ವಿಶೇಷವಾಗಿ ಈ ಹವಾಮಾನ ಬದಲಾವಣೆಯಿಂದ ಆರೋಗ್ಯ ಅಪಾಯಗಳಿಗೆ ಗುರಿಯಾಗುತ್ತಾರೆ ಎಂದು ಸ್ವಾಮಿನಾಥನ್ ಎಚ್ಚರಿಸಿದ್ದಾರೆ.

ಅಜೆರ್‌ಬೈಜಾನ್‌ನ ರಾಜಧಾನಿಯಲ್ಲಿ ಕಾಪ್‌ 29 ಜಾಗತಿಕ ಹವಾಮಾನ ಸಮ್ಮೇಳನದ ವೇಳೆ ಮಾಧ್ಯಮಕ್ಕೆ ನೀಡಿದ ಸಂದರ್ಶನದಲ್ಲಿ, ಪ್ರಾಯೋಗಿಕವಾಗಿ ಭಾರತದಲ್ಲಿ ಪ್ರತಿಯೊಬ್ಬರೂ ಈಗ ಹವಾಮಾನ ಬದಲಾವಣೆಯ ಪರಿಣಾಮಗಳಿಗೆ, ತೀವ್ರ ಶಾಖದಿಂದ ಹರಡುವ ರೋಗಗಳಿಗೆ ಗುರಿಯಾಗುತ್ತಿದ್ದಾರೆ ಎಂದಿದ್ದಾರೆ.

Leave a Reply

Your email address will not be published. Required fields are marked *