ಗದಗ: ನಗರದ ಗಾಂಧಿ ವೃತ್ತದಲ್ಲಿ ಜಮ್ಮ ಕಾಶ್ಮೀರದ ಪಹಲ್ಗಾಮ್ ಜಿಲ್ಲೆಯಲ್ಲಿ ನಡೆದ ಧರ್ಮಾಧಾರಿತ ಹಾಗೂ ಅಮಾನವೀಯವಾಗಿ ನಡೆದ ದಾಳಿಯಲ್ಲಿ ಹುತ್ಮಾತರಾದ ಭಾರತೀಯರಿಗೆ ಹಾಗೂ ವಿದೇಶಿ ಪ್ರಜೆಗಳಿಗೆ ಶ್ರೀರಾಮ ಸೇನಾ, ಆಟೋ ಸೇನಾ ಹಾಗೂ ದಲಿತ ಮಿತ್ರ ಮೇಳ ವತಿಯಿಂದ ದೀಪ ಬೆಳಗಿಸಿ, ಮೌನಾಚರಣೆ ಮಾಡುವ ಮೂಲಕ ಶ್ರದ್ಧಾಂಜಲಿಯನ್ನು ಸಲ್ಲಿಸಲಾಯಿತು.
ಕಾಂಗ್ರೇಸ್ ನಾಯಕರು ಈ ಘಟನೆ ಬಗ್ಗೆ ಯಾವುದೇ ಹೇಳಿಕೆ ನೀಡದಿರುವುದು ಖಂಡನೀಯ ಹಾಗೂ ಇವರ ಈ ವರ್ತನೆಯಿಂದ ಭಯೋತ್ಪಾಕದರ ಮೇಲೆ ಮೃದುಧೋರಣೆ ತೋರುತ್ತಿರುವುದು ಎದ್ದು ಕಾಣುತ್ತದೆ ಮತ್ತು ದೇಶಕ್ಕೆ ಅಪಾಯಕಾರಿ ಎಂದು ಹೇಳಿದರು.

ಮೇಲಿನ ಈ ಪೋಸ್ಟ್ ನ್ನ ಟಚ್ ಮಾಡಿದಲ್ಲಿ ಕಾಲೇಜಿನ ಸಂಪೂರ್ಣ ಮಾಹಿತಿ ಒದಗುತ್ತದೆ.
ಮುಸ್ಲಿಂ ಸಮುದಾಯ ವಕ್ಫ್ ಬೋರ್ಡ ವಿರುದ್ಧ ಹೋರಾಟ ಮಾಡುತ್ತದೆ. ಆದರೆ ಈ ಭಯೋತ್ಪಾದನೆ ಕೃತ್ಯದ ವಿರುದ್ಧ ಯಾವುದೇ ರೀತಿಯ ಹೋರಾಟ ಹಾಗೂ ಪ್ರತಿಕ್ರಿಯೆ ನೀಡದಿರುವುದು ಅವರ ಧರ್ಮದ ಬಗ್ಗೆ ಇರುವ ಕಾಳಜಿ ತೋರುತ್ತದೆ, ಜೊತೆಗೆ ಭಯೋತ್ಪಾದಕರ ಪರವಾಗಿ ಇದೆ ಎಂಬುದು ಕಣ್ಣಿಗೆ ಕಾಣುತ್ತಿದೆ ಎಂದು ಆರೋಪಿಸಿದರು.
ಭಯೋತ್ಪಾದಕರ ಈ ಕೃತ್ಯಕ್ಕೆ ತಕ್ಕ ಪ್ರತ್ಯುತರ ನೀಡಬೇಕು, ಅದು ಯುದ್ಧ ಸಾರುವ ಮೂಲಕವಾದರೂ ಸರಿ ಎಂದು ಶ್ರೀರಾಮ ಸೇನಾ ರಾಜ್ಯ ಪ್ರಧಾನ ಕಾರ್ಯದರ್ಶಿ ರಾಜು ಖಾನಪ್ಪನವರ ತಮ್ಮ ತಮ್ಮ ಆಕ್ರೋಶದ ಮಾತುಗಳನ್ನಾಡಿದರು..

ಈ ಸಂಧರ್ಬದಲ್ಲಿ ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ಜಿಲ್ಲಾಧ್ಯಕ್ಷ ರಾಜು ಗುಡಿಮನಿ, ದಲಿತ ಮುಂಖಡರಾದ ಮಂಜುನಾಥ ಕೋಟ್ನಿಕಲ್, ರಾಘವೇಂಧ್ರ ಪರಾಪೂರ, ಸುರೇಶ ಹಾದಿಮನಿ. ಶ್ರೀರಾಮ ಸೇನಾ ಹಾಗೂ ಆಟೋ ಸೇನೆ ಹಾಗೂ ದಲಿತ ಮಿತ್ರ ಮೇಳದ ಪ್ರಮುಖರಾದ ಮಹೇಶ ರೋಖಡೆ, ಹುಲಗಪ್ಪ ವಾಲ್ಮೀಕಿ, ಕಿರಣ ಹಿರೇಮಠ, ಸತೀಶ ಕುಂಬಾರ, ವೆಂಕಟೇಶ ದೊಡ್ಡಮನಿ, ರಾಚೋಟಿ ಕಾಡಪ್ಪನವರ, ಶರಣೇಶ ರಾಜು ಗದ್ದಿ, ಬಸವರಾಜ ಕುರ್ತಕೋಟಿ, ವಿಶ್ವನಾಥ ಶೀರಿ, ಸಂಜೀವ ಚೆಟ್ಟಿ, ಸುನೀಲ ಮುಳ್ಳಾಳ, ಈರಣ್ಣ ಗಾಣಿಗೇರ, ಶಿವಯೋಗಿ ಹಿರೇಮಠ, ಸ್ವರೂಪ ಉಳ್ಳಿಕಾಶಿ, ಮಾನೇಶ ದಾಸರ, ಮಂಜುನಾಥ ಗುಡಿಮನಿ, ಶರಣಪ್ಪ ಲಕ್ಕುಂಡಿ, ಕುಮಾರ ಮಿಟ್ಟಿಮಠ, ಶಶಿಧರ ಘಟ್ಟಿ, ಅಶೋಕ ಭಜಂತ್ರಿ, ಶ್ರೀನಿವಾಸ ನಿಂಬಲಗುಂಡಿ, ರೇಖಾ ಹುಲ್ಲೂರ ಇಟಗಿ ಸೇರಿದಂತೆ ಮುಂತಾದ ಕಾರ್ಯಕರ್ತರು ಪಾಲ್ಗೊಂಡಿದ್ದರು.
