ಗದಗ : ಕರ್ನಾಟಕ ಸರ್ಕಾರದ ಶಾಲಾ ಶಿಕ್ಷಣ ಇಲಾಖೆ ಹಾಗೂ ಬೆಂಗಳೂರಿನ ಶೇಷಾದ್ರಿಪುರಂ ಪದವಿ ಪೂರ್ವ ಕಾಲೇಜುಗಳ ಸಂಯುಕ್ತಾಶ್ರಯದಲ್ಲಿ ನಡೆದ ರಾಜ್ಯ ಮಟ್ಟದ ಶೂಟಿಂಗ್ ಕ್ರೀಡಾಕೂಟಕ್ಕೆ ಕು : ಮನ್ವಿತಾ ಬಡ್ನಿ ಹಾಗೂ ಅಮೃತಾ ಕಬಾಡಿ ಆಯ್ಕೆಯಾಗಿದ್ದಾರೆ.ಅಲ್ಲದೇ ಕು : ಮನ್ವಿತಾ ಬಡ್ನಿ ಏರ್ ರೈಫಲ್ ಪಿಪ್ ಸೈಟ್ ಶೂಟಿಂಗ್ ಸ್ಪರ್ಧೆಯಲ್ಲಿ ತೃತೀಯ ಸ್ಥಾನಕ್ಕೆ ‘ಶೂಟ್’ ಮಾಡಿ ಕಂಚಿನ ಪದಕ ಪಡೆದು ರಾಷ್ಟ್ರಮಟ್ಟಕ್ಕೆ ತನ್ನ ‘ಸೈಟ್’ನ್ನು ಭದ್ರಪಡಿಸಿಕೊಂಡಿದ್ದು, ಸುಭದ್ರ ಸನ್ಮಾರ್ಗ ಕಾಲೇಜಿನ ಕೀರ್ತಿ ಪತಾಕೆಗೆ ಹೊಸರಂಗನ್ನು ಮೂಡಿಸಿದ್ದಾಳೆ.
ವಿದ್ಯಾರ್ಥಿಗಳ ಸಾಧನೆಗೆ ಸಂಸ್ಥೆಯ ಚೇರಮನ್ನರಾದ ಪ್ರೊ. ರಾಜೇಶ ಕುಲಕರ್ಣಿ, ಆಡಳಿತ ಮಂಡಳಿಯ ಪದಾಧಿಕಾರಿಗಳಾದ ಪ್ರೊ. ರೋಹಿತ್ ಒಡೆಯರ್, ಪ್ರೊ. ಉಡುಪಿ ದೇಶಪಾಂಡೆ, ಪ್ರೊ. ಸೈಯದ್ ಮತೀನ್ ಮುಲ್ಲಾ, ಪ್ರೊ. ರಾಹುಲ್ ಒಡೆಯರ್, ಆಡಳಿತಾಧಿಕಾರಿಗಳಾದ ಶ್ರೀ. ಎಮ್. ಸಿ. ಹಿರೇಮಠ, ಪ್ರಾಚಾರ್ಯರಾದ ಪ್ರೊ. ಪ್ರೇಮಾನಂದ ರೋಣದ ಹಾಗೂ ಕಾಲೇಜಿನ ಬೋಧಕ, ಬೋಧಕೇತರ ಸಿಬ್ಬಂದಿ ಹಾಗೂ ವಿದ್ಯಾರ್ಥಿವೃಂದ ರಾಜ್ಯ ಮಟ್ಟಕ್ಕೆ ಆಯ್ಕೆಯಾದ ಇಬ್ಬರೂ ವಿದ್ಯಾರ್ಥಿಗಳಿಗೆ ತಮ್ಮ ಅಭಿನಂದನೆಗಳನ್ನ ಹಾರೈಸಿದ್ದಾರೆ.