Home » News » ಶಿರಹಟ್ಟಿ ಶಾಸಕ ಡಾ.ಚಂದ್ರು ಲಮಾಣಿ ಸೇರಿ ಬಿಜೆಪಿಯ 18 ಶಾಸಕರ ಅಮಾನತು! 6 ತಿಂಗಳು ಸಸ್ಪೆಂಡ್ ಮಾಡಿ ಸ್ಪೀಕರ್ ರೂಲಿಂಗ್..!

ಶಿರಹಟ್ಟಿ ಶಾಸಕ ಡಾ.ಚಂದ್ರು ಲಮಾಣಿ ಸೇರಿ ಬಿಜೆಪಿಯ 18 ಶಾಸಕರ ಅಮಾನತು! 6 ತಿಂಗಳು ಸಸ್ಪೆಂಡ್ ಮಾಡಿ ಸ್ಪೀಕರ್ ರೂಲಿಂಗ್..!

by CityXPress
0 comments

ಬೆಂಗಳೂರು: ವಿಧಾನಸಭೆ ಸದನದ ಕಾರ್ಯಕಲಾಪಕ್ಕೆ ಅಡ್ಡಿಪಡಿಸಿದ ಬಿಜೆಪಿಯ 18 ಸದಸ್ಯರರುಗಳನ್ನು 6 ತಿಂಗಳ ಕಾಲ ಅಮಾನತುಗೊಳಿಸಿ ಸ್ಪೀಕರ್‌ ಯು.ಟಿ ಖಾದರ್‌ ರೂಲಿಂಗ್‌ ಹೊರಡಿಸಿದ್ದಾರೆ. ಸ್ಪೀಕರ್ ಸ್ಥಾನದಲ್ಲಿ ಕುಳಿತ ಖಾದರ್ ನಿಮ್ಮನ್ನು ಕ್ಷಮಿಸಬಹುದು. ಆದರೆ ಸ್ಪೀಕರ್ ಪೀಠಕ್ಕೆ ಅಗೌರವ ತೋರಿದವರನ್ನು ಕ್ಷಮಿಸಲಾಗಲ್ಲ ಎಂದು ಪೀಠಕ್ಕೆ ಅಗೌರವ ತೋರಿದ್ದಾರೆಂದು ವಿಧಾನಸಭೆ ಕಲಾಪದಿಂದ ಆರು ತಿಂಗಳು 18 ಸದಸ್ಯರನ್ನು  ಅಮಾನತುಗೊಳಿಸಿದ್ದಾರೆ. ಸ್ಪೀಕರ್​ ಯುಟಿ ಖಾದರ್ ಅವರು ಸದನದಲ್ಲಿ ಅಮಾನತುಗೊಳಿಸಿದವರನ್ನು ಹೆಸರು ಹೇಳುತ್ತಿದ್ದಂತೆಯೇ ಮಾರ್ಷಲ್ಸ್, ಒಬ್ಬೊಬ್ಬರನ್ನೇ ಎತ್ತಿಕೊಂಡು ಬಂದು ಹೊರಹಾಕಿದ್ದಾರೆ.

ವರದಿ:ಮಹಲಿಂಗೇಶ್ ಹಿರೇಮಠ

ಅಮಾನತುಗೊಂಡ ಶಾಸಕರು ಯಾರ್ಯಾರು?

ದೊಡ್ಡನಗೌಡ ಪಾಟೀಲ್, ಡಾ. ಅಶ್ವಥ್ ನಾರಾಯಣ, ಬೈರತಿ ಬಸವರಾಜ, ಡಾ. ಶೈಲೇಂದ್ರ ಬೆಲ್ದಾಳೆ, ಮುನಿರತ್ನ, ಧೀರಜ್ ಮುನಿರಾಜು, ಬಿ.ಪಿ. ಹರೀಶ್, ಡಾ. ಭರತ್ ಶೆಟ್ಟಿ, ಚಂದ್ರು ಲಮಾಣಿ, ಉಮಾನಾಥ ಕೋಟ್ಯಾನ್., ಸಿ.ಕೆ. ರಾಮಮೂರ್ತಿ. ಯಶಪಾಲ್ ಸುವರ್ಣ, ಬಿ. ಸುರೇಶ್ ಗೌಡ, ಶರಣು ಸಲಗಾರ್, ಚನ್ನಬಸಪ್ಪ, ಬಸವರಾಜ ಮತ್ತಿಮೂಡ., ಎಸ್. ಆರ್. ವಿಶ್ವನಾಥ್, ಎಂ.ಆರ್. ಪಾಟೀಲ್ ಅವರನ್ನು ವಿಧಾನಸಭೆ ಕಲಾಪದಿಂದ ಆರು ತಿಂಗಳುಗಳ ಕಾಲ ಅಮಾನತು ಮಾಡಿ ಸ್ಪೀಕರ್ ಯುಟಿ ಖಾದರ್ ರೂಲಿಂಗ್ ಹೊರಡಿಸಿದ್ದಾರೆ.

banner

ಸ್ಪೀಕರ್ ರೂಲಿಂಗ್‌ಗೆ ವಿಪಕ್ಷ ಸದಸ್ಯರು ತೀವ್ರ ಖಂಡನೆ ವ್ಯಕ್ತಪಡಿಸಿದ್ದು, ಸದನದ ಬಾವಿಗಿಳಿದು ಧರಣಿ ನಡೆಸಿದ್ದಾರೆ. ಇನ್ನು ಬಿಜೆಪಿಗೆ ಮೈತ್ರಿ ಪಕ್ಷ ಜೆಡಿಎಸ್ ಸದಸ್ಯರು ಸಹ  ಬೆಂಬಲಿಸಿದ್ದಾರೆ.

ಗಲಾಟೆಗೆ ಕಾರಣವೇನು?

ಕರ್ನಾಟಕ ರಾಜ್ಯ ರಾಜಕಾರಣದಲ್ಲಿ ಕೋಲಾಹಲ ಎಬ್ಬಿಸಿರುವ ಹನಿಟ್ರ್ಯಾಪ್ ಹಾಗೂ ಮುಸ್ಲಿಂ ಮೀಸಲಾತಿ ವಿಚಾರಗಳು ವಿಧಾನಸಭೆ ಕಲಾಪದಲ್ಲಿ ಇಂದು(ಮಾರ್ಚ್​ 21) ಬೆಳಗ್ಗೆಯಿಂದಲೇ ಭಾರೀ ಹೈಡ್ರಾಮಾಕ್ಕೆ ಕಾರಣವಾಯಿತು. ಬೆಳಗ್ಗೆ ಸದನ ಶುರುವಾಗುತ್ತಿದ್ದಂತೆಯೇ ಹನಿಟ್ರ್ಯಾಪ್​ ವಿಚಾರ ಪ್ರಸ್ತಾಪ ಮಾಡಿ ಉನ್ನತ ಮಟ್ಟದ ತನಿಖೆಗೆ ಆದೇಶಿಸಬೇಕೆಂದು ಪ್ರತಿಪಕ್ಷ ಪಟ್ಟು ಹಿಡಿಯಿತು. 

ನಂತರ ಮುಸ್ಲಿಂ ಮೀಸಲಾತಿ ವಿಧೇಯಕದ ಕುರಿತು ಸರ್ಕಾರ ಚರ್ಚೆಗೆ ಮುಂದಾಯಿತು. ಇದೇ ವೇಳೆ ಬಿಜೆಪಿ ಶಾಸಕರು ತೀವ್ರ ವಿರೋಧ ವ್ಯಕ್ತಪಡಿಸಿದರು. ಅಲ್ಲದೆ, ವಿಧೇಯಕದ ಪ್ರತಿಗಳನ್ನು ಹರಿದು ಸ್ಪೀಕರ್ ಮೇಲೆ ಎಸೆಯುತ್ತಾ, ‘ಹನಿಟ್ರ್ಯಾಪ್ ಸರ್ಕಾರ’ ಎಂದು ಘೋಷಣೆಗಳನ್ನು ಕೂಗಿದರು. ಇದೇ ವೇಳೆ ಸ್ಪೀಕರ್ ಸಹ ಶಾಸಕರು ತಾಳ್ಮೆ ವಹಿಸುವಂತೆ, ಕಲಾಪಕ್ಕೆ ಅಡ್ಡಿಪಡಿಸದಂತೆ ಮನವಿ ಮಾಡಿದರು. ಆದರೂ ಸಹ ವಿಪಕ್ಷ ಬಿಜೆಪಿ ಸದಸ್ಯರು ಪ್ರತಿಭಟನೆ ಮುಂದುವರಿಸಿದರು. ಇದರಿಂದ ಸ್ಪೀಕರ್​ 18 ಬಿಜೆಪಿ ಸದಸ್ಯರನ್ನು 6 ತಿಂಗಳು ಕಲಾಪದಿಂದ ಅಮಾನತುಗೊಳಿಸಿ ರೂಲಿಂಗ್ ಹೊರಡಿಸಿದರು.

ನಾನು ಸ್ಪೀಕರ್ ಆಗಿದ್ರೆ 2 ವರ್ಷ ಅಮಾನತು ಮಾಡುತ್ತಿದ್ದೆ

ಇನ್ನು ಸ್ಪೀಕರ್​ ಪೀಠಕ್ಕೆ ಅಗೌರವ ತೋರಿದ ಆರೋಪದ ಮೇಲೆ ಬಿಜೆಪಿಯ 18 ಸದಸ್ಯರನ್ನು ಅಮಾನತು ಮಾಡಿರುವ ಬಗ್ಗೆ ಕಾಂಗ್ರೆಸ್ ಶಾಸಕ ಪ್ರದೀಪ್ ಈಶ್ವರ್ ಪ್ರತಿಕ್ರಿಯಿಸಿ, ಬುಕ್, ಪೇಪರ್ ಎಸೆದರೆ ಸುಮ್ಮನಿರಬೇಕಾ? ನಾನು ಸ್ಪೀಕರ್ ಆಗಿದ್ದರೆ 2 ವರ್ಷಗಳ ಕಾಲ ಅಮಾನತು ಮಾಡುತ್ತಿದ್ದೆ ಬಿಜೆಪಿ ಶಾಸಕರು ಸದನದಲ್ಲಿ ಜನಪರ ಸಮಸ್ಯೆ ಬಗ್ಗೆ ಚರ್ಚೆ ಮಾಡಿಲ್ಲ ಎಂದಿದ್ದಾರೆ.

You may also like

Leave a Comment

Soledad is the Best Newspaper and Magazine WordPress Theme with tons of options and demos ready to import. This theme is perfect for blogs and excellent for online stores, news, magazine or review sites.

Buy Soledad now!

Edtior's Picks

Latest Articles

Website designed by Dreamweb
error: Content is protected by Dreamweb