2
ಭಾರತದ T20 ತಂಡದ ನಾಯಕ ಸೂರ್ಯ ಕುಮಾರ್ ಯಾದವ್ ಅವರು ಕುಕ್ಕೆ ಸುಬ್ರಹ್ಮಣ್ಯ ಭೇಟಿ ನೀಡಿದ್ದಾರೆ. ದಕ್ಷಿಣ ಆಫ್ರಿಕಾ ವಿರುದ್ಧ T20 ಸರಣಿ ಗೆದ್ದ ಬಳಿಕ ಪತ್ನಿ ದೇವಿಶಾ ಶೆಟ್ಟಿಯೊಂದಿಗೆ ಕ್ಷೇತ್ರಕ್ಕೆ ಆಗಮಿಸಿದ ಸೂರ್ಯ ಕುಮಾರ್ ಆಶ್ಲೇಷ ಬಲಿ ಪೂಜೆ, ಮಹಾಪೂಜೆ ಅಭಿಷೇಕವನ್ನು ನೆರವೇರಿಸಿದರು.
ದೇವಸ್ಥಾನದ ವತಿಯಿಂದ ಯಾದವ್ ದಂಪತಿಗೆ ಗೌರವ ಸಮರ್ಪಿಸಲಾಯಿತು. ಜುಲೈನಲ್ಲಿ T20 ವಿಶ್ವಕಪ್ ಗೆದ್ದ ಬಳಿಕ ಉಡುಪಿಯ ಕಾಪು ಮಾರಿಗುಡಿ ದೇವಸ್ಥಾನಕ್ಕೆ ಸೂರ್ಯಕುಮಾರ್ ದಂಪತಿ ಭೇಟಿ ನೀಡಿದ್ದರು.ಇದೀಗ ಕುಕ್ಕೆ ಸುಬ್ರಮಣ್ಯ ದೇವಸ್ಥಾನಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದಿದ್ದಾರೆ.