25
ತಿರುಮಲ ಶ್ರೀ ವೆಂಕಟೇಶನ ಸನ್ನಿಧಾನದಲ್ಲಿ ಕಾಲ್ತುಳಿತದಿಂದ ಆರು ಜನ ಭಕ್ತರು ಸಾವನ್ನಪ್ಪಿದ್ದಾರೆ. ಘಟನೆಯ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ತೀವ್ರ ಆಘಾತ ವ್ಯಕ್ತಪಡಿಸಿದ್ದಾರೆ. ಭಕ್ತರು ಮೃತಪಟ್ಟಿರುವುದು ದುಃಖಕರವಾಗಿದ್ದು, ಗಾಯಾಳುಗಳು ಶೀಘ್ರ ಗುಣಮುಖರಾಗಲಿ ಎಂದು ಹಾರೈಸಿದ್ದಾರೆ.
ಆಂಧ್ರ ಸರ್ಕಾರಕ್ಕೆ ಎಲ್ಲ ರೀತಿಯಲ್ಲೂ ಸಹಾಯ ಮಾಡುವುದಾಗಿ ಮೋದಿ ಸ್ಪಷ್ಟಪಡಿಸಿದ್ದಾರೆ. ಇತ್ತ ಆಂಧ್ರ ಸಿಎಂ ಚಂದ್ರಬಾಬು ನಾಯ್ಡು ಸಹ ಪ್ರತಿಕ್ರಿಯಿಸಿದ್ದು, ಈ ದುರಂತಕ್ಕೆ ಕೆಲ ಅಧಿಕಾರಿಗಳೇ ಕಾರಣ ಎಂದಿದ್ದಾರೆ. ಮುಂಜಾಗ್ರತಾ ಕ್ರಮ ಕೈಗೊಳ್ಳದ ಅವರ ವಿರುದ್ಧ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.